
ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣ ವಿಚಾರಣೆಗಾಗಿ ಸಿ.ಬಿ.ಐ ನೋಟಿಸ್ ಜಾರಿ ಹಿನ್ನಲೆಯಲ್ಲಿ ಮಾಧ್ಯಮದ ಮುಂದೆ ಸಚಿವ ಕೆ.ಜೆ ಜಾರ್ಜ್ ಗರಂ ಆದರು.
ನೋಟಿಸ್ ಜಾರಿ ಹಿನ್ನಲೆಯಲ್ಲಿ ಮಾಧ್ಯಮದವರು ಸಚಿವರನ್ನು ಪ್ರಶ್ನೆ ಕೇಳಿದಾಗ, ನೀವು ನನ್ನ ಹತ್ತಿರ ಪ್ರಶ್ನೆ ಕೇಳಲೇ ಬಾರದು ಸಿ.ಬಿ.ಐ ನನ್ನನ್ನು ಕರೆಯಬಹುದು ಅಥವಾ ನನ್ನ ಪಿಎಸ್ ಕರೆಯಬಹುದು ಅದು ಸಿ.ಬಿ.ಐಗೆ ಬಿಟ್ಟ ವಿಚಾರ. ಅದೆಲ್ಲಾ ನಿಮಗೆ ಯಾಕೆ ? ಅದನ್ನೆಲ್ಲ ನೀವು ನನ್ನ ಬಳಿ ಕೇಳೊದೆ ತಪ್ಪು. ಕೇಳಬಾರದು. ಒಂದೊಂದನ್ನು ಬ್ರೇಕಿಂಗ್ ನ್ಯೂಸ್ ಮಾಡಬೇಕಾ? ವರದಿ ಬರುವವರೆಗೂ ಕಾಯಿರಿ. ವರದಿ ಬಂದ ಮೇಲೆ ಏನ್ ಸುದ್ದಿ ಹಾಕ್ತಿರಾ ನಿಮಗೆ ಬ್ರೇಕಿಂಗ್ ಸುದ್ದಿಗೋಸ್ಕರ ನನ್ನ ವಿಷಯ ತಗೊತಿರಿ. ನಿಮಗೆ ಬೇರೆ ವಿಷಯ ಇಲ್ಲವೆ ? ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.