ರಾಜೀನಾಮೆ ಅಸ್ತ್ರಕ್ಕೆ ಮಣಿದ ಸಿಎಂ : ಖಾತೆ ಬದಲಾವಣೆಗೆ ಗ್ರೀನ್ ಸಿಗ್ನಲ್

Published : Jun 11, 2018, 11:05 AM ISTUpdated : Jun 11, 2018, 11:13 AM IST
ರಾಜೀನಾಮೆ ಅಸ್ತ್ರಕ್ಕೆ ಮಣಿದ ಸಿಎಂ : ಖಾತೆ ಬದಲಾವಣೆಗೆ ಗ್ರೀನ್ ಸಿಗ್ನಲ್

ಸಾರಾಂಶ

ಜಿಟಿಜಿಗೆ ಉನ್ನತ ಶಿಕ್ಷಣ ಬದಲು ಸಹಕಾರ  ಪುಟ್ಟರಾಜುಗೆ ಮಂಡ್ಯ ಜಿಲ್ಲಾ ಉಸ್ತುವಾರಿ 

ಬೆಂಗಳೂರು[ಜೂ.11]: ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡು ಜೆಡಿಎಸ್'ನಲ್ಲಿ ಅತೃಪ್ತಿಗೊಂಡಿರುವ ಸಚಿವರ ಖಾತೆಯನ್ನು ಬದಲಾಯಿಸಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಉನ್ನತ ಶಿಕ್ಷಣ ಖಾತೆಗೆ ಜಿ.ಟಿ.ದೇವೇಗೌಡ ಹಾಗೂ ಸಣ್ಣ ನೀರಾವರಿಗಾಗಿ ಸಿ.ಎಸ್. ಪುಟ್ಟರಾಜು ಬೇಸರ ವ್ಯಕ್ತಪಡಿಸಿ ರಾಜೀನಾಮೆಗೆ ಮುಂದಾಗಿದ್ದರು. ಕಳೆದ 2 ದಿನಗಳಲ್ಲಿ ಇಬ್ಬರೊಂದಿಗೆ ಮಾತುಕತೆ ನಡೆಸಿರುವ ಸಿಎಂ ಖಾತೆ ಬದಲಾವಣೆಗೆ ಸಮ್ಮತಿಸಿದ್ದಾರೆ. 

ಜಿ.ಟಿ.ದೇವೇಗೌಡ ಅವರಿಗೆ ಉನ್ನತ ಶಿಕ್ಷಣ ಖಾತೆ ಬದಲು ಸಹಕಾರ ಖಾತೆ, ಪುಟ್ಟರಾಜು ಅವರಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡಲು ಒಪ್ಪಿಗೆ ಸೂಚಿಸಿರುವುದಾಗಿ ಸುವರ್ಣ ನ್ಯೂಸ್'ಗೆ ಉನ್ನತ ಮೂಲಗಳು ತಿಳಿಸಿವೆ.

8ನೇ ತರಗತಿ ಓದಿರುವ ನನಗೆ ಉನ್ನತಶಿಕ್ಷಣ ಏಕೆ ನೀಡಿದ್ದೀರಿ. ಜನರೊಂದಿಗೆ ಬೆರತು ಕೆಲಸ ಮಾಡುವ ಸಚಿವಸ್ಥಾನ ನೀಡಿ ಎಂದು ಬಹಿರಂಗವಾಗಿಯೇ ಅಳಲು ತೋಡಿಕೊಂಡಿದ್ದರೆ, ಮತ್ತೊಬ್ಬ ಸಚಿವ ಪುಟ್ಟರಾಜು ಮಂಡ್ಯ ಜಿಲ್ಲಾ ಉಸ್ತುವಾರಿಗೆ ಪಟ್ಟು ಹಿಡಿದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ