ಪ್ರಾಣಿಗಳಿಗೆ ಎಸೆಯೋ ರೀತಿ ಸಂತ್ರಸ್ತರಿಗೆ ಬಿಸ್ಕೆಟ್ ಎಸೆದು ಅವಮಾನಿಸಿದ ಸಚಿವ ರೇವಣ್ಣ!

Aug 20, 2018, 9:39 AM IST

ಮೊದಲೇ ನೆರೆಯಿಂದ ಸರ್ವಸ್ವವನ್ನು ಕಳೆದುಕೊಂಡು ನೋವನ್ನು ಅನುಭವಿಸುತ್ತಿರುವ ಕೊಡಗು ಪ್ರವಾಹ ಸಂತ್ರಸ್ತರಿಗೆ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವಮಾನಿಸಿದ್ದಾರೆ. ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ರೇವಣ್ಣ, ಪ್ರಾಣಿಗಳಿಗೆ ಎಸೆಯುವ ರೀತಿಯಲ್ಲಿ ಬಿಸ್ಕೆಟ್ ಪ್ಯಾಕೆಟ್‌ಗಳನ್ನು ಎಸೆದಿದ್ದಾರೆ.