ಸಚಿವ ಎಚ್.ಡಿ ರೇವಣ್ಣ ಹೊಸ ಬಾಂಬ್

Published : Jul 09, 2018, 10:19 AM IST
ಸಚಿವ ಎಚ್.ಡಿ ರೇವಣ್ಣ ಹೊಸ ಬಾಂಬ್

ಸಾರಾಂಶ

ಜೆಡಿಎಸ್ ಮುಖಂಡ ಹಾಗೂ ಲೋಕೋಪಯೋಗಿ ಸಚಿವರಾದ ಎಚ್.ಡಿ ರೇವಣ್ಣ ಇದೀಗ ಹೊಸ ಬಾಂಬ್ ಒಂದನ್ನು ಸ್ಫೋಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಲ ಮನ್ನಾಗೆ ಹಣ ನೀಡಲು ಒಪ್ಪಿದ್ದರು, ಆದರೆ ಬಿಜೆಪಿ ನಾಯಕರು ಅದಕ್ಕೆ ಅಡ್ಡಿಯಾದರು ಎಂದು ಹೇಳಿದ್ದಾರೆ. 

ಹಾಸನ:  ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಬೇಕಾದ ಹಣವನ್ನು ನೀಡಲು ಒಪ್ಪಿದ್ದರು. ಆದರೆ, ರಾಜ್ಯ ಬಿಜೆಪಿ ಮುಖಂಡರು ಸಿಎಂ ಕುಮಾರಸ್ವಾಮಿಗೆ ಪ್ರಶಂಸೆ ಹೋಗುತ್ತದೆ ಎಂದು ಹೇಳಿ ಹಣ ಕೊಡಲು ಬಿಡಲಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದ್ದಾರೆ.

ಭಾನುವಾರ ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಮೋದಿ ಅವರು ಸಂಪೂರ್ಣ ಸಾಲ ಮನ್ನಾ ಮಾಡುವ ಬಗ್ಗೆ ಅಗತ್ಯವಾದ ಆರ್ಥಿಕ ನೆರವು ನೀಡಲು ಒಪ್ಪಿದ್ದರು. ಆದರೆ, ಮಾರನೇ ದಿನವೇ ರಾಜ್ಯದ ಬಿಜೆಪಿ ಮುಖಂಡರು ಕೊಡಲು ಬಿಡಲಿಲ್ಲ ಎಂದು ಹೇಳಿದರು. 

ಹೀಗೆ ರಾಜ್ಯ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಬಿಡದ ಬಿಜೆಪಿಯವರು, ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಸೇರಿದಂತೆ ಎಲ್ಲದರಲ್ಲೂ ಅನ್ಯಾಯವಾಗಿದೆ ಎಂದು ಬೊಬ್ಬೆ ಹಾಕುತ್ತಾರೆ. ಅವರಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!