ಲಿಫ್ಟ್ ನಲ್ಲಿ ಸಿಲುಕಿಕೊಂಡು ಹೌಹಾರಿದ ಸಚಿವ ರೇವಣ್ಣ

Published : Oct 12, 2018, 10:08 AM IST
ಲಿಫ್ಟ್ ನಲ್ಲಿ ಸಿಲುಕಿಕೊಂಡು ಹೌಹಾರಿದ ಸಚಿವ ರೇವಣ್ಣ

ಸಾರಾಂಶ

ರಾಜ್ಯ ಇಂಧನ ಸಚಿವ ಎಚ್‌.ಡಿ. ರೇವಣ್ಣ ಸೇರಿದಂತೆ ಹಲವರು ಲಿಫ್ಟ್ ನಲ್ಲಿ ಸಿಲುಕಿಕೊಂಡು ಪರದಾಡಿದ್ದಾರೆ.

ಬೆಂಗಳೂರು, ಅ.12: ರಾಜ್ಯ ಇಂಧನ ಸಚಿವ ಎಚ್‌.ಡಿ. ರೇವಣ್ಣ ಹಾಗೂ ಶಾಸಕರಾದ ಸಿ.ಎನ್‌. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ ಸೇರಿದಂತೆ ಏಳು ಮಂದಿ ಆರು ನಿಮಿಷಗಳ ಕಾಲ ಲಿಫ್ಟ್‌ನೊಳಗೆ ಸಿಲುಕಿಕೊಂಡ ಘಟನೆ ಹಾಸನ ಜಿಲ್ಲಾ ಪಂಚಾಯ್ತಿಯಲ್ಲಿ ಗುರುವಾರ ನಡೆದಿದೆ. 

ಸಂಜೆ 5.45ಕ್ಕೆ ಪ್ರಗತಿ ಪರಿಶೀಲನಾ ಸಭೆ ಮುಗಿದ ಬಳಿಕ ಸಚಿವ ಎಚ್‌.ಡಿ.ರೇವಣ್ಣ, ಶಾಸಕರಾದ ಸಿ.ಎನ್‌.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ ಮತ್ತು ಕೆ.ಎಸ್‌.ಲಿಂಗೇಶ್‌, ಜಿಪಂ ಸಿಇಒ ಪುಟ್ಟಸ್ವಾಮಿ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ ಹಾಗೂ ಸಚಿವರ ಆಪ್ತ ಸಹಾಯಕ ರವಿ ಲಿಫ್ಟ್‌ನಲ್ಲಿ ಕೆಳಗಿಳಿಯುತ್ತಿದ್ದರು.

 ಈ ವೇಳೆ ಓವರ್ ಲೋಡ್ ಆಗಿದ್ದು, ಲಿಫ್ಟ್‌ ಅರ್ಧಕ್ಕೆ ನಿಂತಿದೆ. ಮೊದಲ ನೆಲಮಹಡಿಯಿಂದ 2 ಅಡಿ ಕೆಳ ಹೋಗಿ ನಿಂತಿದೆ. ನಂತರ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಲಿಫ್ಟ್‌ ಬಾಗಿಲನ್ನು ತೆರೆದು ಒಳಗೆ ಸಿಲುಕಿಕೊಂಡಿದ್ದ ಸಚಿವ ರೇವಣ್ಣ, ಶಾಸಕರು ಹಾಗೂ ಅಧಿಕಾರಿಗಳನ್ನು ಹೊರಕ್ಕೆ ಎಳೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು