3 ಡಿಸಿಎಂ: ' ಅಮೀತ್ ಶಾ ತಿಳುವಳಿಕೆ ಪ್ರಶ್ನಿಸುವಂತಿಲ್ಲ'

Published : Aug 31, 2019, 03:34 PM ISTUpdated : Aug 31, 2019, 03:56 PM IST
3 ಡಿಸಿಎಂ: ' ಅಮೀತ್ ಶಾ ತಿಳುವಳಿಕೆ ಪ್ರಶ್ನಿಸುವಂತಿಲ್ಲ'

ಸಾರಾಂಶ

ಬಿಎಸ್‌ವೈ ಸರ್ಕಾರದಲ್ಲಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಯನ್ನು ಮಾಡಲಾಗಿದೆ. ಮುಂದಾಲೋಚನೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಮೂವರು ಡಿಸಿಎಂಗಳನ್ನು ಮಾಡಿದ್ದಾರೆ. ಆದ್ರೆ ಇದನ್ನು ಪ್ರಶ್ನಿಸುವಂತಿಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಮಂಡ್ಯ, (ಆ.31): ಬಿಜೆಪಿ ಸರ್ಕಾರದಲ್ಲಿ ಮೂವರಿಗೆ ಡಿಸಿಎಂ ಹುದ್ದೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವರ ಮಾಧುಸ್ವಾಮಿ ಅವರು ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಟಾಂಗ್ ಕೊಟ್ಟಿದ್ದಾರೆ.

ಇಂದು (ಶನಿವಾರ) ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ನಾವು ಅಮೀತ್ ಶಾ ಅವರ ತಿಳುವಳಿಕೆಯನ್ನು ಪ್ರಶ್ನಿಸುವ ಹಾಗೆ ಇಲ್ಲ ಎಂದು ಹೇಳಿದರು.

3 DCM: ಹೈಕಮಾಂಡ್‌ ನಿರ್ಧಾರವನ್ನು ಪ್ರಶ್ನಿಸಿದ ಬಿಜೆಪಿ ಸಂಸದ

ಮೇಲಿನವರು ಯಾವ ಯಾವ ಕಾರಣಕ್ಕೆ ಮಾಡ್ತಾರೆ ಅಂತಾ ಗೊತ್ತಿಲ್ಲ.ಅವರು ತೀರ್ಮಾನ ತೆಗೆದುಕೊಂಡಿರುವುದು ಪಕ್ಷಕ್ಕೆ ಒಳ್ಳೆಯಾದಾಗುತ್ತೆ ಎಂದುನಾನು ತಿಳಿದುಕೊಂಡಿದ್ದೇನೆ ಎಂದರು.

ಒಬ್ಬೊಬ್ಬರ ಅಭಿಪ್ರಾಯಗಳು ಒಂದೊಂದು ರೀತಿ ಇರುತ್ತವೆ. ಮೇಲೆ ಇರುವವರು ತೀರ್ಮಾನ ತೆಗೆದುಕೊಂಡಾಗ, ನಮಗಿಂತ ಜಾಸ್ತಿ ತಿಳುವಳಿಕೆ ಇದೆ ಎಂದು ಭಾವಿಸುತ್ತೇನೆ ಎಂದು ಪರೋಕ್ಷವಾಗಿ ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಟಾಂಗ್ ಕೊಟ್ಟರು.

ಮೂರು ಡಿಸಿಎಂ ಹುದ್ದೆಗಳು ಅವಶ್ಯಕತೆ ಇತ್ತಾ? ಎಂದು  ಶ್ರೀನಿವಾಸ್ ಪ್ರಸಾದ್ ಪರೋಕ್ಷವಾಗಿ ತಮ್ಮ ಪಕ್ಷದ ಹೈಕಮಾಂಡ್‌ಗೆ ಪ್ರಶ್ನಿಸಿದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!
ಸೊಗಸಾದ ಬಜೆಟ್‌ ಫ್ರೆಂಡ್ಲಿ ಸ್ಮಾರ್ಟ್‌ಫೋನು ಬೇಕಾ? ಇಲ್ಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ17 5ಜಿ!