ಜುಬೈರ್ ಹತ್ಯೆ: ಕುಟುಂಬಸ್ಥರ ಭೇಟಿಗೆ ಹೋದ ಖಾದರ್‌ಗೆ ವಾಪಸು ಕಳುಹಿಸಿದ ಗುಂಪು!

Published : Oct 07, 2017, 01:23 PM ISTUpdated : Apr 11, 2018, 12:50 PM IST
ಜುಬೈರ್ ಹತ್ಯೆ:  ಕುಟುಂಬಸ್ಥರ ಭೇಟಿಗೆ ಹೋದ ಖಾದರ್‌ಗೆ ವಾಪಸು ಕಳುಹಿಸಿದ ಗುಂಪು!

ಸಾರಾಂಶ

ಇತ್ತೀಚೆಗೆ ನಡೆದಿದ್ದ ಜುಬೈರ್ ಹತ್ಯೆಯ ಹಿನ್ನೆಲೆಯಲ್ಲಿ ಮೃತರ ಮನೆಗೆ ಭೇಟಿ ನೀಡಲು ಬಂದ ಸಚಿವ ಯು.ಟಿ. ಖಾದರ್ ಅವರನ್ನು ಉದ್ರಿಕ್ತ ಗುಂಪು ಘೇರಾವ್ ಹಾಕಿದ್ದಲ್ಲದೇ ಅರ್ಧ ಕಿ.ಮೀ. ದೂರ ತಳ್ಳಿಕೊಂಡೇ ವಾಪಾಸ್ ಕಳುಹಿಸಿದ ಘಟನೆ ಮುಕ್ಕಚ್ಚೇರಿ ಬಳಿ ಶುಕ್ರವಾರ ಸಂಜೆ ವೇಳೆ ನಡೆದಿದೆ.

ಉಳ್ಳಾಲ: ಇತ್ತೀಚೆಗೆ ನಡೆದಿದ್ದ ಜುಬೈರ್ ಹತ್ಯೆಯ ಹಿನ್ನೆಲೆಯಲ್ಲಿ ಮೃತರ ಮನೆಗೆ ಭೇಟಿ ನೀಡಲು ಬಂದ ಸಚಿವ ಯು.ಟಿ. ಖಾದರ್ ಅವರನ್ನು ಉದ್ರಿಕ್ತ ಗುಂಪು ಘೇರಾವ್ ಹಾಕಿದ್ದಲ್ಲದೇ ಅರ್ಧ ಕಿ.ಮೀ. ದೂರ ತಳ್ಳಿಕೊಂಡೇ ವಾಪಾಸ್ ಕಳುಹಿಸಿದ ಘಟನೆ ಮುಕ್ಕಚ್ಚೇರಿ ಬಳಿ ಶುಕ್ರವಾರ ಸಂಜೆ ವೇಳೆ ನಡೆದಿದೆ.

ಸಚಿವರಿದ್ದ ವಾಹನದ ಮೇಲೆ ಗುಂಪು ಕಲ್ಲು ತೂರಾಟ ನಡೆಸಿದರೂ ಯಾವುದೇ ಹಾನಿಯಾಗಿಲ್ಲ. ಅ.4ರಂದು ಮುಕ್ಕಚ್ಚೇರಿ ನಿವಾಸಿ ಜುಬೈರ್‌ರನ್ನು ಹತ್ಯೆ ಮಾಡಿದ್ದರ ಹಿಂದೆ ಕಾಂಗ್ರೆಸ್ ಮುಖಂಡನ ಕೈವಾಡ ಇರುವ ಬಗ್ಗೆ ಸಂಶಯ ವ್ಯಕ್ತವಾಗಿತ್ತು.

ಈ ನಡುವೆ ಜುಬೈರ್ ಅಂತ್ಯಕ್ರಿಯೆಯಲ್ಲಿ ಖಾದರ್ ಭಾಗವಹಿಸದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸ್ ಭದ್ರತೆಯಲ್ಲಿಯೇ ತೆರಳಿದ ಖಾದರ್, ಜುಬೈರ್ ಕುಟುಂಬಸ್ಥರನ್ನು ಭೇಟಿಯಾಗಲು ಅವಕಾಶ ನೀಡದೇ ಅವರನ್ನು ಅರ್ಧ ಕಿ.ಮೀ. ದೂರ ತಳ್ಳಿಕೊಂಡೇ ಹಿಂದಕ್ಕೆ ಕಳುಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ‘ಇಯರ್‌ರಿಂಗ್‌’ ಸೃಷ್ಟಿಸಿದ ಕುತೂಹಲ!
ಸುಧಾಮೂರ್ತಿ ಡೀಪ್‌ಫೇಕ್‌ ವಿಡಿಯೋ ವೈರಲ್‌ : ನಂಬಿ ಮೋಸಹೋಗದಂತೆ ವಿನಂತಿ