
ಬೆಂಗಳೂರು(ಮಾ.11): ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರದಿದ್ದರೆ ರಾಜ್ಯದಲ್ಲಿ ಕೋಮುವಾದಿಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಲೋಕೋಪಯೋಗಿ ಸಚಿವ ಮಹದೇವಪ್ಪ ಹೇಳಿದ್ದಾರೆ.
ಕೆಲವರು ಸಂವಿಧಾನ ತಿದ್ದುಪಡಿ ಮಾಡುತ್ತೇವೆಂದು ಬಹಿರಂಗವಾಗಿ ಹೇಳುತ್ತಾರೆ, ಬುದ್ದಿಜೀವಿಗಳ ರಕ್ತ ಟೆಸ್ಟ್ ಮಾಡಬೇಕು ಎಂದು ಹೇಳುತ್ತಾರೆ. ಸಂವಿಧಾನದ ಮೇಲೆ ಗದಾಪ್ರಹಾರ ಮಾಡಲು ಮುಂದಾಗಿದ್ದಾರೆ. ಈಗ ನಾವು ಎಚ್ಚೆತ್ತುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಮೋದಿಯನ್ನು ಟೀಕೆ ಮಾಡುವ ಗಟ್ಸ್ ಇರುವುದು ಸಿದ್ದರಾಮಯ್ಯ ಅವರಿಗೆ ಮಾತ್ರ. ಪ್ರಧಾನಿ ರಾಷ್ಟ್ರೀಯ, ಅಂತರಾಷ್ಟ್ರೀಯ ವಿಚಾರಗಳನ್ನು ಬಿಟ್ಟು ಪಂಚಾಯತ್ ಚುನಾವಣೆಗೆ ಬಂದು ಪ್ರಚಾರ ಮಾಡುತ್ತಿದ್ದಾರೆ. ಕೋಮು ಶಕ್ತಿಗಳು, ಜಾತಿ ಶಕ್ತಿಗಳನ್ನು ತಡೆಯಲು ಸಿದ್ದರಾಮಯ್ಯನವರಿಗೆ ಅವಕಾಶಕೊಡಿ ಎಂದು ಮಹಾದೇವಪ್ಪ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.