
ಬೆಂಗಳೂರು: ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಡುವೆ ವಾಕ್ಸಮರ ಮುಂದುವರೆದಿದೆ.
‘ಎಂ.ಬಿ ಪಾಟೀಲ್ಗೆ ತಲೆ ತಿರುಗಿದೆ’ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
ಶಾಮನೂರು ಅವರು ವಯೋಸಹಜ ಗುಣಗಳಿಂದಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ, ಎಂದು ಪಾಟೀಲ್ ಹೇಳಿದ್ದಾರೆ.
ಸಾರ್ವಜನಿಕವಾಗಿ ಏಕವಚನದಲ್ಲಿ ಹೇಳಿಕೆ ನೀಡುತ್ತಿರುವುದು ಅವರಿಗೆ ಶೋಭೆ ತರಲ್ಲ; ನನಗೆ ಜೀವ ಬೆದರಿಕೆ ಇದೆ, ಭದ್ರತೆ ಬೇಕು ಎಂದು ಎಲ್ಲಿಯೂ ಹೇಳಿಲ್ಲ, ಕೆಲ ಸ್ವಾಮೀಜಿಗಳು ನಮ್ಮನ್ನು ಸರ್ವನಾಶ ಮಾಡುವುದಾಗಿ ಶಪಥ ಮಾಡಿದ್ದಾರೆ, ಸರ್ವನಾಶ ಎಂದರೆ ಏನು ಎನ್ನುವುದನ್ನು ಶಾಮನೂರು ಅವರು ತಿಳಿಸಬೇಕು ಎಂದು ಎಂ.ಬಿ. ಪಾಟೀಲ್ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.