ರಮಾನಾಥ್ ರೈ ನೇತೃತ್ವದಲ್ಲಿ ಇಂದು 'ಸಾಮರಸ್ಯ ನಡಿಗೆ'

Published : Dec 12, 2017, 08:40 AM ISTUpdated : Apr 11, 2018, 01:07 PM IST
ರಮಾನಾಥ್ ರೈ ನೇತೃತ್ವದಲ್ಲಿ  ಇಂದು 'ಸಾಮರಸ್ಯ ನಡಿಗೆ'

ಸಾರಾಂಶ

ಕಳೆದ ಕೆಲ ತಿಂಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆ ಅಕ್ಷರಶಃ ಕೋಮು ಸಂಘರ್ಷಕ್ಕೆ ಹೊತ್ತಿ ಉರಿದಿತ್ತು.

ಮಂಗಳೂರು (ಡಿ.12): ಕಳೆದ ಕೆಲ ತಿಂಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆ ಅಕ್ಷರಶಃ ಕೋಮು ಸಂಘರ್ಷಕ್ಕೆ ಹೊತ್ತಿ ಉರಿದಿತ್ತು.

ಬಂಟ್ವಾಳ, ಕಲ್ಲಡ್ಕ ಪ್ರದೇಶಗಳಲ್ಲಿ ಹಿಂಸೆ ಭುಗಿಲೆದ್ದ ಪರಿಣಾಮ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ 52 ದಿನಗಳ ಕಾಲ ನಿಷೇಧಾಜ್ಞೆ ವಿಧಿಸಲಾಗಿತ್ತು. ಇದೀಗ ಇಡೀ ಜಿಲ್ಲೆಯಲ್ಲಿ ಶಾಂತಿ ನೆಲೆಸಿದ್ದು, ಜನ ಜೀವನ ಸಹಜ ಸ್ಥಿತಿಯಲ್ಲಿದೆ. ಹೀಗಿರುವಾಗಲೇ ಕರಾವಳಿಯಲ್ಲಿ ಶಾಂತಿ ನೆಲೆಸಲಿ ಅನ್ನೋ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಅವರು, ಸಾಮರಸ್ಯದ ಹೆಸ್ರಲ್ಲಿ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಇಂದು ಪಾದಯಾತ್ರೆ ಮಾಡಲಿದ್ದಾರೆ. ಅದರಂತೆ ಇಂದು ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ಸಾಮರಸ್ಯ ನಡಿಗೆಗೆ ಚಾಲನೆ ಸಿಗಲಿದೆ. ಅಲ್ಲಿಂದ ನಡಿಗೆ ಕೋಮು ಸೂಕ್ಷ್ಮ ಪ್ರದೇಶಗಳಾದ ಮಾರಿಪಳ್ಳ, ಕೈಕಂಬ, ಬಿ.ಸಿ.ರೋಡ್, ಬಂಟ್ವಾಳ, ಕಲ್ಲಡ್ಕ ಮೂಲಕ ಸುಮಾರು 25 ಕಿ.ಮೀ ಸಾಗಿ ಮಾಣಿಯಲ್ಲಿ ಸಂಜೆ ಸಮಾರೋಪಗೊಳ್ಳಲಿದೆ. ಇನ್ನು ಈ ಯಾತ್ರೆಯನ್ನು ಬಹುಭಾಷಾ ನಟ ಪ್ರಕಾಶ್ ರೈ ಉದ್ಘಾಟಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ