
ಬಳ್ಳಾರಿ, [ಅ.21]: ಸಚಿವ ಡಿ.ಕೆ.ಶಿವಕುಮಾರ್ಗೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದ ಬಗ್ಗೆ ಅಕ್ಷೇಪ ಇದ್ದರೆ ಕ್ಯಾಬಿನೆಟ್ ಚರ್ಚೆ ವೇಳೆ ಹೇಳಬೇಕಿತ್ತು. ಈ ರೀತಿ ಬಹಿರಂಗ ಕ್ಷಮೆ ಕೇಳುವ ಅಗತ್ಯವೇನಿತ್ತು ಎಂದು ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಇಂದು [ಭಾನುವಾರ] ಕೂಡ್ಲಿಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಸಚಿವ ಶಿವಕುಮಾರ್ ಶೋ ಮಾಡೋದು ಬಿಟ್ಟು ಕೆಲಸ ಮಾಡಿದ್ರೆ, ಒಳಿತು. ಅವರ ಹಿಂಬಾಲಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವಾಗ ಎಲ್ಲಿಗೆ ಹೋಗಿದ್ದರು.
ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಗರಂ : ಯಾರ ಪರವೂ ಇಲ್ಲ ಎಂದ ಸಚಿವ
ಎಲ್ಲ ಸಭೆಗಳಲ್ಲಿ ಮಾತನಾಡುತ್ತಿದ್ರೂ ಅದನ್ನು ಏಕೆ ತಡೆಯಲಿಲ್ಲ? ಕ್ಯಾಬಿನೆಟ್ನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಮತ್ತು ಎಸ್.ಎಸ್. ಮಲ್ಲಿಕಾರ್ಜುನ ಮಾತ್ರ ಪರ-ವಿರೋಧ ಚರ್ಚೆ ಮಾಡಿದ್ದರು. ಪ್ರತ್ಯೇಕ ಧರ್ಮ ಬೇಕು ಎಂದು ಹೇಳಿದ್ದನ್ನು ಪರಿಗಣಿಸಿದ್ದೇವೆ ಅಷ್ಟೇ ಎಂದು ಸಚಿವ ಶಿವಕುಮಾರ್ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದರು.
ಮಾಜಿ ಸಚಿವ ಎಂ.ಬಿ.ಪಾಟೀಲ್ಗೆ ನಮ್ಮ ಬೆಂಬಲವಿದೆ. ಲೋಕಸಭಾ ಉಪ ಚುನಾವಣೆಯಲ್ಲಿ ನನಗೆ ಕೂಡ್ಲಿಗಿ ಜವಾಬ್ದಾರಿ ಕೊಟ್ಟಿದ್ದಾರೆ ಅದನ್ನು ನಿಭಾಯಿಸುತ್ತೇನೆ. ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.