ಬಿಗ್ ಬ್ರೆಕಿಂಗ್: ರಾಜಕಾರಣಕ್ಕೆ ಟ್ವಿಸ್ಟ್, ಈಶ್ವರಪ್ಪ ಭೇಟಿ ಮಾಡಿದ ಜೆಡಿಎಸ್ ಮುಖಂಡ

Published : Jul 11, 2019, 09:23 PM ISTUpdated : Jul 11, 2019, 09:31 PM IST
ಬಿಗ್ ಬ್ರೆಕಿಂಗ್: ರಾಜಕಾರಣಕ್ಕೆ ಟ್ವಿಸ್ಟ್, ಈಶ್ವರಪ್ಪ ಭೇಟಿ ಮಾಡಿದ ಜೆಡಿಎಸ್ ಮುಖಂಡ

ಸಾರಾಂಶ

ರಾಜ್ಯ ರಾಜಕಾರಣದ ದಿಕ್ಕು ಬದಲಾಗುತ್ತಾ? ಇದು ರಾಜ್ಯ ರಾಜಕಾರಣಕ್ಕೆ ಹೊಸ ತಿರುವು ಮೂಡಿಸುವ ಸ್ಟೋರಿ. ಜೆಡಿಎಸ್ ಮುಖಂಡರೊಬ್ಬರು ಹತಾಶೆಯಿಂದ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಬ್ರೇಕ್ ಆಗಿದೆ.

ಬೆಂಗಳೂರು[ಜು. 11]  ಬಿಜೆಪಿ ನಾಐಕ ಕೆ.ಎಸ್ ಈಶ್ವರಪ್ಪ ಅವರನ್ನು ಜೆಡಿಎಸ್ ನಾಯಕ ಸಾರಾ ಮಹೇಶ್ ಭೇಟಿ ಮಾಡಿದ್ದಾರೆ ಎನ್ನುವುದು ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ಬಿಜೆಪಿ ಹಿರಿಯ ನಾಯಯ ಈಶ್ವರಪ್ಪ ಅವರನ್ನು ಕುಮಾರಸ್ವಾಮಿ ಅವರ ಬಲಗೈ ಎಂದು ಕರೆಸಿಕೊಳ್ಳುವ ಸಾರಾ ಮಹೇಶ್ ಭೇಟಿ ಮಾಡಿರುವುದು ಕುತೂಹಲ ಹೆಚ್ಚಳ ಮಾಡಿದೆ.

ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರ್ ಮತ್ತು ಈಶ್ವರಪ್ಪ ಅವರನ್ನು ಭೇಟಿ ಮಾಡಲು ಸಾರಾ ಮಹೇಶ್ ಅವರನ್ನು ಕಳುಹಿಸಿಕೊಟ್ಟವರು ಯಾರು? ಹಾಗಾದರೆ  ಮಹೇಶ್ ಈಶ್ವರಪ್ಪ ಅವರನ್ನು ಭೇಟಿ ಮಾಡಿದ್ದು ಕಾಂಗ್ರೆಸ್ ಹೊರಗಿಡುವ ತಂತ್ರವೇ? ಎಂಬೆಲ್ಲ ವಿಚಾರಗಳು ಚರ್ಚೆಗೆ ವೇದಿಕೆ ಮಾಡಿಕೊಟ್ಟಿದೆ.

ಸುಪ್ರೀಂ ನಿರ್ದೇಶನದಲ್ಲಿ ಸ್ಪೀಕರ್‌ಗೆ ಅರ್ಥವಾಗದ ಅದೊಂದು ಆಂಗ್ಲ ಶಬ್ದ!

ದೋಸ್ತಿ ಸರಕಾರ ಪತನದ ಅಂಚಿಗೆ ಬಂದಿರುವಾಗ ಜೆಡಿಎಸ್ ಮತ್ತು ಬಿಜೆಪಿ ನಾಯಕರ ಭೇಟಿ ಕಾಂಗ್ರೆಸ್ ಗೆ ಬಿಸಿ ಮುಟ್ಟಿಸಿದೆ. ಬಿಜೆಪಿ ನಾಯಕರ ಬಳಿ ಜೆಡಿಎಸ್ ನಾಐಕರನ್ನು ಕಳುಹಿಸಿಕೊಟ್ಟವರು ಯಾರು? ಕುಮಾರಕೃಪಾ ಅತಿಥಿಗೃಹದಲ್ಲಿ ಎರಡು ಪಕ್ಷದ ನಾಯಕರ ನಡುವೆ ನಡೆದ ಮಾತುಕತೆ ಏನು? ಎಂಬೆಲ್ಲ ವಿಚಾರಗಳು ಈಗ ಬಹುಚರ್ಚಿತ ವಿಷಯವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ
ರೈತ, ಆಟೋ ಚಾಲಕರ ಹೆಣ್ಮಕ್ಕಳಿಗೆ ಗವಿಮಠದಿಂದ ಫ್ರೀ ಕಾಲೇಜು, ಹಾಸ್ಟೆಲ್‌