
ಬೆಂಗಳೂರು (ಸೆ.20): ರಾಜ್ಯದಲ್ಲಿ AIMS ಮಾದರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ರಾಜ್ಯದ ಇಬ್ಬರು ಪ್ರಭಾವಿ ಸಚಿವರ ಮಧ್ಯೆ ಭಾರೀ ಪೈಪೋಟಿ ಶುರುವಾಗಿದೆ.
ಕಲಬುರಗಿಗೆ ಆಸ್ಪತ್ರೆ ನೀಡಲು ಡಾ.ಶರಣ್ ಪ್ರಕಾಶ್ ಪಾಟೀಲ್ ಒಂದು ಕಡೆ ಒತ್ತಾಯ ಮಾಡುತ್ತಿದ್ದರೆ ಇನ್ನೊಂದು ಕಡೆ ರಾಯಚೂರಿಗೆ AIMS ಮಾದರಿಯ ಸೂಪರ್ ಸ್ಪೆಷಾಲಿಟಿ ತರಲು ತನ್ವೀರ್ ಸೇಠ್ ಲಾಬಿ ನಡೆಸುತ್ತಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮೇಲೆ ಡಾ. ಪಾಟೀಲ್ ಒತ್ತಡ ಹೇರಿದ್ದಾರೆ. ಕಲಬುರಗಿಗೆ ಆಸ್ಪತ್ರೆ ಪಡೆಯಲು ಶರಣ ಪ್ರಕಾಶ್ ಪಾಟೀಲ್ ಗೆ ಮಲ್ಲಿಕಾರ್ಜುನ ಖರ್ಗೆ ಬೆಂಬಲವಿದೆ. ಜೊತೆಗೆ ಸಿದ್ದರಾಮಯ್ಯ ಪ್ರಭಾವ ಬಳಸಿಕೊಂಡು ಹೋರಾಟ ನಡೆಸುತ್ತಿದ್ದಾರೆ.
ಇಬ್ಬರು ಪ್ರಭಾವಿ ನಾಯಕರು ಶತಾಯಗತಾಯ AIMS ಮಾದರಿಯ ಸೂಪರ್ ಸ್ಪೆಷಲಾಟಿ ಆಸ್ಪತ್ರೆ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಸಚಿವರಿಬ್ಬರ ಪೈಪೋಟಿ ಕಂಡು ಸಿಎಂ ಸಿದ್ದರಾಮಯ್ಯ ಗೊಂದಲಕ್ಕೆ ಸಿಲುಕಿದ್ದಾರೆ. ಕಳೆದ ವರ್ಷದ ಬಜೆಟ್ ನಲ್ಲಿ AIMS ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಣೆ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.