ಸಚಿವರ ಕಾರು ಅಪಘಾತ :ಆಸ್ಪತ್ರೆಗೆ ದಾಖಲು

Published : Dec 01, 2016, 06:00 PM ISTUpdated : Apr 11, 2018, 12:44 PM IST
ಸಚಿವರ ಕಾರು ಅಪಘಾತ :ಆಸ್ಪತ್ರೆಗೆ ದಾಖಲು

ಸಾರಾಂಶ

ಕಲಾಪಗಳನ್ನು ಮುಗಿಸಿ ನಗರಕ್ಕೆ ಮರಳುತ್ತಿದ್ದಾಗ ಹಲಗಾ ಸಮೀಪ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮೆಟಾಡೋರ್‌ಗೆ ಸಚಿವರ ಕಾರು ಡಿಕ್ಕಿ ಹೊಡೆದಿದೆ.

ಬೆಳಗಾವಿ(ಡಿ.1): ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಕಾರು ಗುರುವಾರ ಹಲಗಾ ಸಮೀಪ ಅಪಘಾತಕ್ಕೀಡಾಗಿದ ಪರಿಣಾಮ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಳಿಗಾಲದ ಅವೇಶನದ ಕಲಾಪಗಳನ್ನು ಮುಗಿಸಿ ನಗರಕ್ಕೆ ಮರಳುತ್ತಿದ್ದಾಗ ಹಲಗಾ ಸಮೀಪ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮೆಟಾಡೋರ್‌ಗೆ ಸಚಿವರ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನ ಮುಂಬದಿ ಕುಳಿತಿದ್ದ ಸಚಿವ ರಮೇಶ್ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸುರಕ್ಷಿತವಾಗಿದ್ದಾರೆ. ಅಪಘಾತ ನಡೆದ ತಕ್ಷಣ ಅವರನ್ನು ಸಮೀಪದ ಲೇಕ್‌ವ್ಯೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಚಿಕಿತ್ಸೆ ಬಳಿಕ ಮನೆಗೆ ತೆರಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು