
ಕೊಪ್ಪಳ(ನ.13): ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ಅವರು ಮತ್ತೆ ತಮ್ಮ ನಾಲಿಗೆಯನ್ನು ಸಾರ್ವಜನಿಕವಾಗಿ ಹರಿಬಿಟ್ಟಿದ್ದಾರೆ.
ನಿನ್ನೆ ಕೊಪ್ಪಳದಲ್ಲಿ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಚಿವ ಆಂಜನೇಯ ಹಾಗೂ ಲೋಕಸಭೆ ಮಾಜಿ ಸ್ಪೀಕರ್ ಮೀರಾಕುಮಾರ್ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು. ಆಂಜನೇಯ ಬೆಂಬಲಿಗರು ಇಬ್ಬರಿಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆಯಲ್ಲಿ ಮೀರಾ ಕುಮಾರಿ ಹಾಗೂ ಬೆಂಬಲಿಗರಿಗೆ ಕಾಫಿ, ಟೀ ವ್ಯವಸ್ಥೆ ಇಲ್ಲದ್ದಕ್ಕೆ ಕೋಪಗೊಂಡ ಸಚಿವರು ಏ ಯಾವನು ಅವ ಭಟ್ಟ ಸೂ.. ಮಗ ಕಾಫಿ, ಟೀ ವ್ಯವಸ್ಥೆ ಮಾಡು ಪ್ರವಾಸಿ ಮಂದಿರದ ಸಿಬ್ಬಂದಿಯ ವಿರುದ್ಧ ಹರಿಹಾಯ್ದರು. ಸಚಿವರು ಬೈಗುಳದ ವಿಡಿಯೋ ಎಲ್ಲಡೆ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.