
ನವದೆಹಲಿ(ಜು.17): ಕೇಂದ್ರ ನಗರಾಭಿವೃದ್ಧಿ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವ ವೆಂಕಯ್ಯ ನಾಯ್ಡು ಅವರನ್ನು ಎನ್'ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಉತ್ತರ ಪ್ರದೇಶದ ರಮಾನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದು ಇಂದು ಚುನಾವಣೆ ಸಹ ನಡೆದಿದೆ. ಬಹುತೇಕ ಕೋವಿಂದ್ ಅವರೆ ರಾಷ್ಟ್ರಪತಿಯಾಗಿ ಆಯ್ಕೆಯಾಗಲಿದ್ದಾರೆ.
ದಕ್ಷಿಣದ ಪ್ರಮುಖ ಮುಖಂಡರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನೇಮಿಸಲಾಗುತ್ತದೆ ಎಂದು ಈಗಾಗಲೇ ಬಿಜೆಪಿ ಉನ್ನತಮಟ್ಟದಲ್ಲಿ ತೀರ್ಮಾನಿಸಲಾಗಿತ್ತು.ಅದರಂತೆ ಎನ್. ವೆಂಕಯ್ಯ ನಾಯ್ಡು ಅವರನ್ನು ಅಭ್ಯರ್ಥಿಯನ್ನಾಗಿ ನೇಮಕ ಮಾಡಲಾಗಿದೆ. ವಿರೋಧ ಪಕ್ಷಗಳೂ ತಮ್ಮ ಅಭ್ಯರ್ಥಿಯನ್ನಾಗಿ ಈಗಾಗಲೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರನ್ನು ನೇಮಿಸಿದೆ.
ಉಪರಾಷ್ಟ್ರಪತಿ ಚುನಾವಣೆ ಆಗಸ್ಟ್ 7ರಂದು ನಡೆಯಲಿದ್ದು, ಲೋಕಸಭೆಯ ಲೋಕಸಭೆ ಹಾಗೂ ಲೋಕಸಭೆಯ 787 ಸಂಸದರು ಉಪರಾಷ್ಟ್ರಪತಿ ಅವರನ್ನು ಚುನಾಯಿಸಲಿದ್ದಾರೆ. ಪ್ರಸ್ತುತ ಉಪರಾಷ್ಟ್ರಪತಿಯಾಗಿರುವ ಹಮೀದ್ ಹನ್ಸಾರಿ ಅವರ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.