
ಚಿತ್ರದುರ್ಗ [ಜು.04] : ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಇದೀಗ ರಾಜ್ಯದ ಸಚಿವರೋರ್ವರು ಬಹಿರಂಗ ರಾಜೀನಾಮೆ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಮುಗಿಸಲು ಆಗ್ರಹಿಸಿ ಕೈಗೊಂಡಿದ್ದ ಸತ್ಯಾಗ್ರಹದಲ್ಲಿ ಮಾತನಾಡಿದ ಚಿತ್ರದುರ್ಗ ಜಿಲ್ಲೆ ಉಸ್ತುವಾರಿ ಸಚಿವ ವೆಂಕಟರಮಣಪ್ಪ ವಾಣಿ ವಿಲಾಸ ಜಲಾಶಯಕ್ಕೆ ಆಗಸ್ಟ್ 10ರ ಒಳಗಾಗಿ ನೀರು ಹರಿಸದೇ ಇದ್ದಲ್ಲಿ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.
ಹಿರಿಯೂರು ವಕೀಲರ ಸಂಘದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಅವರು ಜುಲೈ 30ರ ಒಳಗೆ ಮಳೆಯಾಗಲಿದೆ. ನಂತರ ವಾಣಿ ವಿಲಾಸ ಸಾಗರಕ್ಕೆ ನೀರು ಬರಲಿದೆ. ಆಗಸ್ಟ್ 10ರೊಳಗೆ ನೀರು ಬಾರದಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸ್ಥಾನ ತ್ಯಜಿಸುತ್ತೇನೆ ಎಂದು ಹೇಳಿದ್ದಾರೆ.
ನಾನು ಓರ್ವ ರೈತನ ಮಗನಾಗಿದ್ದು, ಕೊಟ್ಟ ಮಾತನ್ನು ಎಂದಿಗೂ ತಪ್ಪುವುದಿಲ್ಲ ಎಂದು ಪಾವಗಡ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ವೆಂಕಟರಮಣಪ್ಪ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.