ನೆರೆ ಸಂತ್ರಸ್ತರಿಗೆ ಸಚಿವ ಜಮೀರ್‌ ಅಹಮ್ಮದ್ ರಿಂದ ಆಹಾರ ಕಿಟ್‌

Published : Aug 26, 2018, 11:11 AM ISTUpdated : Sep 09, 2018, 09:52 PM IST
ನೆರೆ ಸಂತ್ರಸ್ತರಿಗೆ ಸಚಿವ ಜಮೀರ್‌ ಅಹಮ್ಮದ್ ರಿಂದ ಆಹಾರ ಕಿಟ್‌

ಸಾರಾಂಶ

ಕೊಡಗು ಸಂತ್ರಸ್ತರಿಗೆ ಸಚಿವ ಜಮೀರ್ ಅಹಮದ್ ಆಹಾರ ಕಿಟ್ ಗಳನ್ನು ವಿತರಿಸಿದರು.  ನೆರೆಗೆ ಸಿಲುಕಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಮಂದಿನ 15 ದಿನದಲ್ಲಿ ತಾತ್ಕಾಲಿಕ ಪಡಿತರ ಚೀಟಿ ವಿತರಿಸಲಾಗುವುದು. 50 ಸಾವಿರ ಕುಟುಂಬಗಳಿಗೆ ವಿಶೇಷ ಅನ್ನಭಾಗ್ಯ ಯೋಜನೆಯಡಿ ಆಹಾರ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಮಡಿಕೇರಿ: ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಶನಿವಾರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಹಾರದ ಕಿಟ್‌ಗಳನ್ನು ವತರಿಸಿದ್ದಾರೆ.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೋದಾಮಿನಲ್ಲಿ ಕೆಲವು ಸಂತ್ರಸ್ತರಿಗೆ ಸಾಂಕೇತಿಕವಾಗಿ ಕಿಟ್‌ ವಿತರಿಸಿ ಮಾತನಾಡಿದ ಅವರು, ನೆರೆಗೆ ಸಿಲುಕಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಮಂದಿನ 15 ದಿನದಲ್ಲಿ ತಾತ್ಕಾಲಿಕ ಪಡಿತರ ಚೀಟಿ ವಿತರಿಸಲಾಗುವುದು. 50 ಸಾವಿರ ಕುಟುಂಬಗಳಿಗೆ ವಿಶೇಷ ಅನ್ನಭಾಗ್ಯ ಯೋಜನೆಯಡಿ ಆಹಾರ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

10 ಕೆ.ಜಿ ಅಕ್ಕಿ, 1 ಕೆ.ಜಿ ತೊಗರಿ ಬೇಳೆ, ಉಪ್ಪು, ಸಕ್ಕರೆ, 1 ಲೀ. ಅಡುಗೆ ಎಣ್ಣೆ, 5 ಲೀ. ಸೀಮೆಎಣ್ಣೆಯನ್ನು ಕಿಟ್‌ ಒಳಗೊಂಡಿದೆ. ಸಾಧ್ಯವಾದಲ್ಲಿ ಇದರ ಸಂಖ್ಯೆಯನ್ನು ಇನ್ನಷ್ಟುಹೆಚ್ಚಿಸಲಾಗುವುದು. ಜಿಲ್ಲೆಯಲ್ಲಿ ಸುಮಾರು 50ಕ್ಕಿಂತ ಹೆಚ್ಚಿನ ಪರಿಹಾರ ಕೇಂದ್ರ ತೆರೆಯಲಾಗಿದೆ. ಈ ಕೇಂದ್ರಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಅಕ್ಕಿ ಮತ್ತು ತೊಗರಿ ಬೇಳೆಯನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌