
ರಿಯಾದ್[ಜೂ.೧೫]: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ನೂತನ ಸಚಿವರಾಗಿ ನೇಮಕವಾಗಿರುವ ಜಮೀರ್ ಅಹ್ಮದ್ ಖಾನ್, ಸೌದಿ ಅರೆಬಿಯಾದಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಿಸುತ್ತಿದ್ದಾರೆ.
ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಚಿವ ಜಮೀರ್ ಅಹ್ಮದ್, ಸೌದಿಯ ಉಮರಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಬಾರಿಯ ರಂಜಾನ್ ಹಬ್ಬವನ್ನು ಸೌದಿಯಲ್ಲೇ ಆಚರಿಸಲು ನಿರ್ಧರಿಸಿದ್ದ ಜಮೀರ್, ಅದತರಂತೆ ಆಪ್ತರ ಸಮೇತ ಉಮರಾಗೆ ಬಂದಿಳಿದಿದ್ದಾರೆ.
ಕರ್ನಾಟಕ ರಾಜ್ಯದ ಜನರಿಗೆ ಒಳಿತಾಗಲಿ, ಪವಿತ್ರ ರಂಜಾನ್ ಹಬ್ಬ ಎಲ್ಲರಿಗೂ ಶುಭ ನೀಡಲಿ ಎಂದು ಜಮೀರ್ ಪ್ರಾರ್ಥಿಸಿದ್ದಾಗಿ ಮೂಲಗಳು ತಿಳಿಸಿವೆ. ದೇಶದ ಹಾಗೂ ರಾಜ್ಯದ ಜನರಿಗೆ ಆರೋಗ್ಯ ಸುಖ ಸಂಪತ್ತು ಶಾಂತಿ ನೀಡಲೆಂದು ಪ್ರಾರ್ಥಿಸಿದ್ದಾಗಿ ಜಮೀರ್ ಕೂಡ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.