
ಬೆಂಗಳೂರು(ಸೆ.21) :ಅಂತಿಮ ಕ್ಷಣದಲ್ಲಿ ಪ್ರಧಾನಿ ಮೋದಿ ಕೊನೆಗೂ ಕಾವೇರಿ ಸಂಕಷ್ಟಕ್ಕೆ ಕಿವಿಗೊಟ್ಟಿದ್ದಾರೆ. ಪ್ರಧಾನಿಯವರ ಜೊತೆ ಅನಂತ್ ಕುಮಾರ್, ಸದಾನಂದ ಗೌಡ ಹಾಗೂ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿ 10 ನಿಮಿಷ ಕಾಲ ಕಾವೇರಿ ಸಂಕಷ್ಟದ ಕುರಿತು ಪ್ರಧಾನಿಗೆ ವಿವರಣೆ ನೀಡಿದ್ದಾರೆ. ಮೂವರು ಸಚಿವರು ಪ್ರಧಾನಿಯವರಿಗೆ ಮನವಿ ಮಾಡಿ, ನೀವೇ ಈಗ ರಾಜ್ಯದ ಜನತೆಯ ಹಿತಾಸಕ್ತಿ ಕಾಪಾಡಬೇಕು ಎಂದು ತಿಳಿಸಿದ್ದಾರೆ.
ಮೋದಿ ಸೂಚನೆ ಹಿನ್ನೆಲೆಯಲ್ಲಿ ಕಾವೇರಿ ವಿವರ ಪಡೆದ ಉಮಾಭಾರತಿ ಮೂವರು ಸಚಿವರನ್ನು ಭೇಟಿಯಾಗಿ ಸುಮಾರು ಒಂದೂವರೆ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ನಾಳೆ ಕಾವೇರಿ ವಿಚಾರ ಕುರಿತು ಹಣಕಾಸು ಸಚಿವ ಅರುಣ್ ಜೇಟ್ಲಿ, ಕಾನೂನು ಸಚಿವ ರವಿಶಂಕರ್ ಪ್ರಸಾದ್ ಜೊತೆ ಸಭೆ ಹಾಗೂ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಜೊತೆಯೂ ಚರ್ಚೆ ಸಾಧ್ಯತೆಯಿದೆ. ಶುಕ್ರವಾರ ಸಂಜೆಯೊಳಗೆ ಕೇಂದ್ರದ ತೀರ್ಮಾನ ಹೊರಬೀಳುವ ನಿರೀಕ್ಷೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.