
ಬೆಂಗಳೂರು : ಸಚಿವ ಸ್ಥಾನದ ಆಸೆಗಳು ಎಲ್ಲರಿಗೂ ಇರುತ್ತವೆ. ಅದನ್ನು ತಪ್ಪೆಂದು ಹೇಳಲಾಗುವುದಿಲ್ಲ. ಆದರೆ, ಪಕ್ಷ ಉಳಿದಾಗ ಮಾತ್ರ ನಾವೆಲ್ಲರೂ ಉಳಿಯಲು ಸಾಧ್ಯವಾಗುತ್ತದೆ. ಎರಡು ವರ್ಷದ ಅವಧಿಗೆ ಸಚಿವ ಸ್ಥಾನ ನೀಡಲಾಗಿದೆ.
ಎರಡು ವರ್ಷದ ಬಳಿಕ ರೊಟೇಷನ್ ಮಾಡಲಾಗುತ್ತದೆ. ಅಲ್ಲಿಯವರೆಗೂ ಅಸಮಾಧಾನಗೊಂಡಿರುವ ಶಾಸಕರು ತಾಳ್ಮೆ ವಹಿಸಬೇಕು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ 5 ವರ್ಷ ಸರ್ಕಾರ ನಡೆಸುವುದಕ್ಕೆ ಮಾತು ಕೊಟ್ಟಿದ್ದೇವೆ. ಇದನ್ನು ಅರ್ಥ ಮಾಡಿಕೊಂಡು ಮತ್ತು ಪಕ್ಷ ಇದ್ದರೆ ನಾವು ಎಂಬುದನ್ನು ತಿಳಿದುಕೊಳ್ಳಬೇಕು. ಪಕ್ಷದಲ್ಲಿ ಮೊದಲಿನ ಪರಿಸ್ಥಿತಿ ಇಲ್ಲದಿರುವುದರಿಂದ ಯಾವುದೇ ತ್ಯಾಗಕ್ಕೂ ಸಿದ್ಧರಿರಬೇಕು ಎಂದು ಹೇಳಿದರು.
ಸಿದ್ದರಾಮಯ್ಯನವರ ಸರ್ಕಾರದಲ್ಲಿ ನನಗೂ 7-8 ತಿಂಗಳು ಸಚಿವ ಸ್ಥಾನ ಸಿಗದೆ ಖಾಲಿ ಇದ್ದೆ. ಧರ್ಮಸಿಂಗ್ ಸರ್ಕಾರದಲ್ಲಿಯೂ ಸಂಪುಟದಿಂದ ಹೊರಗಿಡಲಾಗಿತ್ತು. ಆ ಸಂದರ್ಭದಲ್ಲಿ ಯಾವೊಬ್ಬ ನಾಯಕರು ಕೂಡ ನನ್ನ ಪರವಾಗಿ ಮಾತನಾಡಲು ಮುಂದೆ ಬಂದಿರಲಿಲ್ಲ. ಹೀಗಾಗಿ, ಪರಿಸ್ಥಿತಿ ಅರ್ಥ ಮಾಡಿಕೊಂಡು, ನಿಷ್ಠಾವಂತ ಕಾರ್ಯಕರ್ತನಾಗಿ ಸುಮ್ಮನಿದ್ದೆ. ಕೊನೆಗೆ ಹೈಕಮಾಂಡ್ ಕರೆದು ಸಚಿವ ಸ್ಥಾನ ನೀಡಿತು ಎಂದರು.
ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಸಮಾಧಾನ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ಅವರಿಗೆ ಸ್ವಲ್ಪ ಸಮಸ್ಯೆಯಾಗಿರುವುದರಿಂದ ಆವೇಶದಲ್ಲಿ ಮಾತನಾಡಿದ್ದಾರೆ. ನನ್ನ ಸ್ನೇಹಿತರಾಗಿರುವುದರಿಂದ ಅವರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.