ಪ್ರತಿದಿನ ಜೆಡಿಎಸ್ ಕಚೇರಿಗೆ ಮಂತ್ರಿಗಳ ಭೇಟಿ

Published : Jul 29, 2018, 08:30 AM ISTUpdated : Jul 30, 2018, 12:16 PM IST
ಪ್ರತಿದಿನ ಜೆಡಿಎಸ್ ಕಚೇರಿಗೆ ಮಂತ್ರಿಗಳ ಭೇಟಿ

ಸಾರಾಂಶ

ಜೆಡಿಎಸ್ ಕಚೇರಿ ಪ್ರತಿದಿನವೂ ಕೂಡ ಸಚಿವರು ಭೇಟಿಯು ಕಡ್ಡಾಯವಾಗಿದೆ. ಪಕ್ಷದ ಕಾರ್ಯಕರ್ತರ, ನಾಯಕರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್‌ನ ಸಚಿವರು ಆಗಸ್ಟ್ ತಿಂಗಳಲ್ಲಿ ಪ್ರತಿದಿನ ಒಬ್ಬೊಬ್ಬರಂತೆ ಪಕ್ಷದ ಕಚೇರಿ ಜೆ.ಪಿ.ಭವನಕ್ಕೆ ಆಗಮಿಸಲಿದ್ದಾರೆ. 

ಬೆಂಗಳೂರು : ಪಕ್ಷದ ಕಾರ್ಯಕರ್ತರ, ನಾಯಕರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್‌ನ ಸಚಿವರು ಆಗಸ್ಟ್ ತಿಂಗಳಲ್ಲಿ ಪ್ರತಿದಿನ ಒಬ್ಬೊಬ್ಬರಂತೆ ಪಕ್ಷದ ಕಚೇರಿ ಜೆ.ಪಿ.ಭವನಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಸೇರಿದಂತೆ ಎಲ್ಲಾ ಸಚಿವರು ಜೆ.ಪಿ.ಭವನದಲ್ಲಿ ರಜೆದಿನಗಳನ್ನು ಹೊರತುಪಡಿಸಿ ಇನ್ನುಳಿದ ದಿನಗಳಲ್ಲಿ ಲಭ್ಯವಾಗಲಿದ್ದಾರೆ. 

ಈ ವೇಳೆ ಸಚಿವರ ಬಳಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬಹುದಾಗಿದೆ. ಇತ್ತೀಚೆಗಷ್ಟೇ ಪಕ್ಷದ ಕಾರ್ಯಕರ್ತರು ತಮ್ಮ ಅಳಲನ್ನು ತೋಡಿಕೊಳ್ಳಲು ವಿಧಾನಸೌಧಕ್ಕೆ ಅಲೆದಾಡಲು ಸಾಧ್ಯವಿಲ್ಲ, ಹೀಗಾಗಿ ಸಚಿವರು ಪಕ್ಷದ ಕಚೇರಿಗೆ ಆಗಮಿಸಿ ಕಾರ್ಯಕರ್ತರೊಂದಿಗೆ ಚರ್ಚಿಸಬೇಕು ಎಂದು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಜೆಡಿಎಸ್ ವರಿಷ್ಠರು ಇದೀಗ ಪಕ್ಷದ ಕಚೇರಿಗೆ ತೆರಳಿ ಕಾರ‌್ಯಕರ್ತರ ಮನವಿಯನ್ನು ಸ್ವೀಕರಿಸುವಂತೆ ಸೂಚನೆ ನೀಡಿದ್ದಾರೆ. ಸಚಿವರು ಪಕ್ಷದ ಕಾರ್ಯಕರ್ತರಿಗೆ ಸ್ಪಂದಿಸಲಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌