
ಕಠ್ಮಂಡು: ಕೆಲಸ ಮಾಡದ ಸೋಮಾರಿ ಸಚಿವರನ್ನು ವಜಾ ಮಾಡುವುದನ್ನು ನೋಡಿದ್ದೇವೆ. ಆದರೆ, ನೇಪಾಳದಲ್ಲಿ ಮಾತ್ರ ಹಾಗಲ್ಲ. ಸಚಿವರು ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಬೇಕು ಎಂದಾದರೆ ಲ್ಯಾಪ್ಟಾಪ್ ಬಳಸುವುದನ್ನು ಕಲಿಯಲೇ ಬೇಕು. ಇಲ್ಲವಾದರೆ ಅವರು ಮಂತ್ರಿ ಹುದ್ದೆಯನ್ನು ಕಳೆದುಕೊಳ್ಳಲಿದ್ದಾರೆ!
ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ತಮ್ಮ ಸಚಿವ ಸಂಪುಟದ ಹೊಸ ಸಚಿವರಿಗೆ ಇಂಥದ್ದೊಂದು ಎಚ್ಚರಿಕೆ ನೀಡಿದ್ದಾರೆ. ಮುಂದಿನ 6 ತಿಂಗಳಿನಲ್ಲಿ ಅವರು ತಮ್ಮ ಪ್ರಧಾನಿ ಕಚೇರಿಯನ್ನು ಕಾಗದ ರಹಿತ ಮಾಡಲು ಮುಂದಾಗಿದ್ದಾರೆ. ಆ ಬಳಿಕ ಎಲ್ಲಾ ಸಭೆಗಳಿಗೆ ಪೇಪರ್ ಬದಲು ಲ್ಯಾಪ್ಟಾಪ್ ಬಳಸಲಾಗುತ್ತದೆ.
ಇದರ ಪೂರ್ವ ತಯಾರಿಯಾಗಿ ಸಚಿವರು ಲ್ಯಾಪ್ಟಾಪ್ ಕಲಿಯುವಂತೆ ಸೂಚಿಸಲಾಗಿದೆ. ಹೀಗಾಗಿ ಪ್ರಧಾನಿಯ ಈ ನಿರ್ಧಾರ ಸಚಿವರನ್ನು ಪೇಚಿಗೆ ಸಿಲುಕಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.