ಮುಸ್ಲಿಮರಿಗೆ ಅಲ್ಪಸಂಖ್ಯಾತ ಮಾನ್ಯತೆ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಉತ್ತರಿಸಲು ಕೊನೆಯ ಅವಕಾಶ ನೀಡಿದ ಸುಪ್ರೀಂ

Published : Aug 08, 2017, 02:06 PM ISTUpdated : Apr 11, 2018, 12:50 PM IST
ಮುಸ್ಲಿಮರಿಗೆ ಅಲ್ಪಸಂಖ್ಯಾತ ಮಾನ್ಯತೆ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಉತ್ತರಿಸಲು ಕೊನೆಯ ಅವಕಾಶ ನೀಡಿದ ಸುಪ್ರೀಂ

ಸಾರಾಂಶ

ರಾಜ್ಯದಲ್ಲಿರುವ ಮುಸ್ಲಿಮೇತರ ಸಮುದಾಯಗಳಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡುವ ವಿಚಾರದಲ್ಲಿ ಪ್ರತಿಕ್ರಿಯಿಸಲು ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊನೆಯ ಅವಕಾಶವನ್ನು ನೀಡಿದೆ. ಮೂರು ತಿಂಗಳೊಳಗೆ ನ್ಯಾಯಾಲಯದಲ್ಲಿ ಉತ್ತರ ಸಲ್ಲಿಸುವಂತೆ  ಜಮ್ಮು ಮತ್ತು ಕಾಶ್ಮೀರ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಗಡುವು ನೀಡಿದೆ.

ನವದೆಹಲಿ: ರಾಜ್ಯದಲ್ಲಿರುವ ಮುಸ್ಲಿಮೇತರ ಸಮುದಾಯಗಳಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡುವ ವಿಚಾರದಲ್ಲಿ ಪ್ರತಿಕ್ರಿಯಿಸಲು ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊನೆಯ ಅವಕಾಶವನ್ನು ನೀಡಿದೆ.

ಮೂರು ತಿಂಗಳೊಳಗೆ ನ್ಯಾಯಾಲಯದಲ್ಲಿ ಉತ್ತರ ಸಲ್ಲಿಸುವಂತೆ  ಜಮ್ಮು ಮತ್ತು ಕಾಶ್ಮೀರ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಗಡುವು ನೀಡಿದೆ.

ಅಲ್ಪಸಂಖ್ಯಾತ ಮಾನ್ಯತೆ ಬಗ್ಗೆಗಿರುವ ಗೊಂದಲವನ್ನು ಬಗೆಹರಿಸಲು ಸಮಿತಿಯನ್ನು ರಚಿಸುವಂತೆ ಈ ಹಿಂದೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ ನೀಡಿತ್ತು.

ಆದರೆ ಸದ್ಯದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯಲ್ಲಿ ಸಭೆಯನ್ನು ಕರೆಯಲಾಗಲಿಲ್ಲವೆಂದು ಜಮ್ಮು  ಮತ್ತು ಕಾಶ್ಮೀರ ಸರ್ಕಾರ ಪ್ರತಿಕ್ರಿಯಿಸಿದೆ.

ಜಮ್ಮು  ಮತ್ತು ಕಾಶ್ಮೀರ ಸರ್ಕಾರದ ಪ್ರತಿಕ್ರಿಯೆಗೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ, ನ್ಯಾಯಾಲಯವನ್ನು ಅವಮಾನಿಸುತ್ತಿದ್ದೀರೆಂದು ಎಚ್ಚರಿಕೆ ನೀಡಿದೆ.

ಮುಸ್ಲಿಮರಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡಿರುವುದನ್ನು ಪ್ರಶ್ನಿಸಿ ಅಂಕುರ್ ಶರ್ಮಾ ಎಂಬವರು ಸುಪ್ರೀಂ ಕೋರ್ಟ್’ನಲ್ಲಿ ಅರ್ಜಿ ಸಲ್ಲಿಸಿದ್ದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕುಳಿತು ಈ ಗೊಂದಲವನ್ನು ಬಗೆಹರಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು.

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಬಹುಸಂಖ್ಯಾತರಾಗಿರುವ  ಮುಸ್ಲಿಮರಿಗೆ ಅಲ್ಪಸಂಖ್ಯಾತರ ಸೌಲಭ್ಯ ಒದಗಿಸಲಾಗಿರುವ ಬಗ್ಗೆ ಸುಪ್ರೀಂ ಕೇಂದ್ರ ಸರ್ಕಾರದಿಂದಲೂ ಪ್ರತಿಕ್ರಿಯೆ ಕೇಳಿತ್ತು. ಕೇಂದ್ರವು ಪ್ರತಿಕ್ರಿಯಿಸದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ರೂ.30000 ದಂಡವನ್ನೂ ವಿಧಿಸಿತ್ತು.

  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bhatkal: ಮರ ಏರಿ ಹರಕೆ ತೀರಿಸುವ ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ಶೇಡಬರಿ ಜಾತ್ರೆ
'ನಾಯಿ-ನರಿಗಳು ಕರವೇ ಬಗ್ಗೆ ಮಾತಾಡಿದ್ರೆ ಏನ್‌ ಹೇಳೋಕೆ ಆಗುತ್ತೆ..' ಸುದೀಪ್‌ ಭೇಟಿ ಕುರಿತ ವಿವಾದದ ಬಗ್ಗೆ ನಾರಾಯಣ ಗೌಡ ತಿರುಗೇಟು