
ಬೆಳಗಾವಿ(ಅ. 17): ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿರುವುದು ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಬಳಿಯ ಕುಗನೊಳ್ಳಿ ಬಳಿ ಬಳ್ಳಾರಿ-ಪೂನಾ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದಾಗಿ ಬಸ್'ನ ಗಾಜುಗಳು ಪುಡಿ ಪುಡಿಯಾಗಿದೆ.
ಮಹಾರಾಷ್ಟ್ರದಲ್ಲಿ ಎಂ.ಎಸ್.ಆರ್.ಟಿ.ಸಿ(ಮಹಾರಾಷ್ಟ್ರ ಸಾರಿಗೆ ಸಂಸ್ಥೆ) ನೌಕರರು ಪ್ರತಿಭಟನೆ ನಡೆಸುತ್ತಿರುವ ವೇಳೆಯಲ್ಲೇ ಕರ್ನಾಟಕ ಸಾರಿಗೆ ಬಸ್ ಹೋಗಿದ್ದರಿಂದ ಆಕ್ರೋಶಗೊಂಡ ನೌಕರರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವೆ ಸಾರಿಗೆ ಸಂಚಾರ ಬಂದ್ ಆಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿಯಲ್ಲಿ ಕರ್ನಾಟಕದ ಎಲ್ಲಾ ಬಸ್ ಸಂಚಾರ ಬಂದ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.