ಚಾಕೊಲೇಟ್ ಆಸೆ ತೋರಿಸಿ ಮಕ್ಕಳಿಗೆ ಸಿಗರೇಟ್ ಸೇದಿಸಿದ ಕಿಡಿಗೇಡಿಗಳು

Published : Jan 18, 2022, 12:51 PM IST
ಚಾಕೊಲೇಟ್ ಆಸೆ ತೋರಿಸಿ ಮಕ್ಕಳಿಗೆ ಸಿಗರೇಟ್ ಸೇದಿಸಿದ ಕಿಡಿಗೇಡಿಗಳು

ಸಾರಾಂಶ

ಶಿವಣ್ಣ, ಚಿಕ್ಕಣ್ಣ, ಬೀರಲಿಂಗಪ್ಪ, ಚೇತನ್, ಕೀರ್ತನ ಕನಕದಾಸ ಎಂಬುವವರೆ ಈ ಕೃತ್ಯ ಎಸಗಿದ ಕಿಡಿಗೇಡಿಗಳು. ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದರೂ, ಇದುವರೆಗೂ ಕ್ರಮ ಕೈಗೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತುರುವೇಕೆರೆ(ನ.18): ಕಿಡಿಗೇಡಿಗಳು ಅಂಗನವಾಡಿ ಮಕ್ಕಳಿಗೆ ಚಾಕೊಲೇಟ್ ಆಸೆ ತೋರಿಸಿ ಬೀಡಿ ಸೇದಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆ ತುರುವೇಕೆರೆ  ತಾಲೂಕಿನ ಕೆ. ಮೇಲನಹಳ್ಳಿಯಲ್ಲಿನ ಅಂಗನವಾಡಿಯಲ್ಲಿ ಈ ಘಟನೆ ನಡೆದಿದ್ದು, ಮಕ್ಕಳು ಬೀಡಿ ಸೇದುವುದನ್ನು ಮೊಬೈಲ್'ನಲ್ಲಿ ರೆಕಾರ್ಡ್ ಮಾಡಿ ಮಕ್ಕಳಿಗೆ ಕಿರಿಕಿರಿ ನೀಡುತ್ತಿದ್ದರು.

ಶಿವಣ್ಣ, ಚಿಕ್ಕಣ್ಣ, ಬೀರಲಿಂಗಪ್ಪ, ಚೇತನ್, ಕೀರ್ತನ ಕನಕದಾಸ ಎಂಬುವವರೆ ಈ ಕೃತ್ಯ ಎಸಗಿದ ಕಿಡಿಗೇಡಿಗಳು. ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದರೂ, ಇದುವರೆಗೂ ಕ್ರಮ ಕೈಗೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದೂರು ನೀಡಿದ ಬಳಿಕವೂ ಮಕ್ಕಳಿಗೆ ಕಿಡಿಗೇಡಿಗಳು ಬೀಡಿ ಸೇದಿಸುವುದನ್ನು ಮುಂದುವರೆಸಿದ್ದಾರೆ ಎನ್ನಲಾಗುತ್ತಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!
ಬಾಗಲಕೋಟೆ: ದಾಸೋಹ ಚಕ್ರವರ್ತಿ, ಬಂಡಿಗಣಿ ಮಠದ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ!