ಮದರಸಾಕ್ಕೆ ನುಗ್ಗಿ ಬೆಂಕಿ ಹಚ್ಚಿದ ಕಿಡಿಗೇಡಿಗಳು

Published : Jun 10, 2017, 02:52 PM ISTUpdated : Apr 11, 2018, 01:08 PM IST
ಮದರಸಾಕ್ಕೆ ನುಗ್ಗಿ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಾರಾಂಶ

ಮದರಸಾದ ಬಾಗಿಲಿಗೆ ಚಿಲಕ ಹಾಕಿತ್ತಾದರೂ ಬೀಗ ಹಾಕಿರಲಿಲ್ಲ. ಇದರಿಂದ ಸುಲಭವಾಗಿ ಮದರಸಾದೊಳಗೆ ನುಗ್ಗಿದ ಕಿಡಿಗೇಡಿಗಳು ನಮಾಝ್‌ಗೆ ಬಳಸುವ ಮುಸಲ್ಲಾವನ್ನು ಡೆಸ್ಕ್‌ನ ಮೇಲಿಟ್ಟು ಬೆಂಕಿ ಹಚ್ಚಿದ್ದಾರೆ.

ಬಂಟ್ವಾಳ: ಮದರಸಾವೊಂದರ ಬಾಗಿಲು ತೆರೆದು ಒಳಗೆ ಪ್ರವೇಶಿದ ಕಿಡಿಗೇಡಿಗಳು ಮರದ ಪೀಠೋಪಕರಣಗಳಿಗೆ ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆಪೊಲೀಸ್‌ ಠಾಣಾ ವ್ಯಾಪ್ತಿಯ ಕುಕ್ಕಿಪ್ಪಾಡಿ ಗ್ರಾಮದ ಎಲ್ಪೆಲ್‌ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಮದರಸಾದ ಬಾಗಿಲಿಗೆ ಚಿಲಕ ಹಾಕಿತ್ತಾದರೂ ಬೀಗ ಹಾಕಿರಲಿಲ್ಲ. ಇದರಿಂದ ಸುಲಭವಾಗಿ ಮದರಸಾದೊಳಗೆ ನುಗ್ಗಿದ ಕಿಡಿಗೇಡಿಗಳು ನಮಾಝ್‌ಗೆ ಬಳಸುವ ಮುಸಲ್ಲಾವನ್ನು ಡೆಸ್ಕ್‌ನ ಮೇಲಿಟ್ಟು ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಮಾವಿನಕಟ್ಟೆಜುಮಾ ಮಸೀದಿ ಅಧ್ಯಕ್ಷ ಅಬ್ದುಲ್‌ ರಝಾಕ್‌ ಪುಂಜಾಲಕಟ್ಟೆಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸ್‌ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲ್‌ನಲ್ಲಿ ಹುಡುಗಿಗೆ ಪ್ರಪೋಸ್ ಮಾಡಿ ಅಲ್ಲೇ ತಾಳಿ ಕಟ್ಟಿದ ಯುವಕ: ವೀಡಿಯೋ ಭಾರಿ ವೈರಲ್
Hate Speech Bill: ಸರ್ವಜನಾಂಗ ಶಾಂತಿಯ ತೋಟ ಆಗಲು ಈ ಮಸೂದೆ ಬೇಕೇಬೇಕು