ಕಾಣೆಯಾಗಿದ್ದ ನಗರದ ವಿದ್ಯಾರ್ಥಿನಿ ಶವವಾಗಿ ಪತ್ತೆ

Published : Feb 03, 2018, 06:44 PM ISTUpdated : Apr 11, 2018, 01:06 PM IST
ಕಾಣೆಯಾಗಿದ್ದ ನಗರದ ವಿದ್ಯಾರ್ಥಿನಿ ಶವವಾಗಿ ಪತ್ತೆ

ಸಾರಾಂಶ

ಕಾಣೆಯಾಗಿದ್ದ ನಗರದ ವಿದ್ಯಾರ್ಥಿನಿ ಶವವಾಗಿ ಪತ್ತೆ

ಬೆಂಗಳೂರು(ಫೆ.03): ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸುಭಾಷ್ ನಗರ ರಾಣಿ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಳು. ಈ ಬಗ್ಗೆ ವಿದ್ಯಾರ್ಥಿನಿ ಪೋಷಕರು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಬೆಳಗ್ಗೆ ರಾಣಿ ಶವ ಹೊಸೂರು ಮುಖ್ಯರಸ್ತೆಯ ಹೊಸ ರೋಡ್ ಜಂಕ್ಷನ್ ಬಳಿಯ ಬಸವಾಪುರ ಕೆರೆಯಲ್ಲಿ ಪತ್ತೆಯಾಗಿದೆ. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಮೃತ ದೇಹವನ್ನು ಹೊರತೆಗೆದು ಶವ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ
ಮಾದಪ್ಪ ಮೆಸ್‌ನಲ್ಲಿ ಮುದ್ದೆ ಬಡಿಸೋದು ಅಶುಚಿ; ಟೀಕಿಸಿದವರ ಬೌದ್ಧಿಕ ಬಡತನ ಬಯಲಿಗೆಳೆದ ಕಾರ್ತಿಕ್ ರೆಡ್ಡಿ!