ದೆಹಲಿ ಪೊಲೀಸರು, ಸರ್ಕಾರಕ್ಕೆ ನೋಟಿಸ್

Published : Nov 25, 2016, 04:52 PM ISTUpdated : Apr 11, 2018, 01:13 PM IST
ದೆಹಲಿ ಪೊಲೀಸರು, ಸರ್ಕಾರಕ್ಕೆ ನೋಟಿಸ್

ಸಾರಾಂಶ

ಅ.15ರಂದು ಜೆಎನ್‌ಯು ಆವರಣದಲ್ಲಿ ಎಬಿವಿಪಿ ಸದಸ್ಯರ ಜತೆಗಿನ ಮಾತಿನ ಚಕಮಕಿ ಬಳಿಕ ನಜೀಬ್ ಅಹ್ಮದ್ ನಾಪತ್ತೆಯಾಗಿದ್ದಾರೆ.

ನವದೆಹಲಿ(ನ.25): ನಾಪತ್ತೆಯಾಗಿರುವ ಜವಾಹರ್‌'ಲಾಲ್ ನೆಹರೂ ವಿವಿ ವಿದ್ಯಾರ್ಥಿ ನಜೀಬ್ ಅಹ್ಮದ್ ಅವರ ತಾಯಿ, ತಮ್ಮ ಮಗನನ್ನು ಹುಡುಕಿಕೊಡಿ ಎಂದು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.

ಇಂದು ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜಿ ಎಸ್ ಸಿಸ್ತಾನಿ ಮತ್ತು ನ್ಯಾ. ವಿನೋದ್ ಗೋಯೆಲ್ ಅವರಿದ್ದ ಪೀಠ, ವಿದ್ಯಾರ್ಥಿ ನಾಪತ್ತೆ ಪ್ರಕರಣ ಕುರಿತ ನಿಲುವು ತಿಳಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, 3 ದಿನಗಳೊಳಗೆ ತನಿಖೆಯ ವರದಿ ನೀಡುವಂತೆಯೂ ಸೂಚಿಸಿದೆ.

ಅ.15ರಂದು ಜೆಎನ್‌ಯು ಆವರಣದಲ್ಲಿ ಎಬಿವಿಪಿ ಸದಸ್ಯರ ಜತೆಗಿನ ಮಾತಿನ ಚಕಮಕಿ ಬಳಿಕ ನಜೀಬ್ ಅಹ್ಮದ್ ನಾಪತ್ತೆಯಾಗಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!
ಕಂಟೋನ್ಮೆಂಟ್‌ ರೈಲು ನಿಲ್ದಾಣದ 371 ಮರ ಕಡಿಯಲು ಹೈಕೋರ್ಟ್‌ ತಡೆ, ತನ್ನ ಅನುಮತಿ ಇಲ್ಲದೆ ಏನೂ ಮಾಡುವಂತಿಲ್ಲವೆಂದು ಆರ್ಡರ್