ದಸರಾ ಆಹ್ವಾನ ಪತ್ರಿಕೆಯಲ್ಲಿ ಆಡಳಿತ ಮಂಡಳಿ ಎಡವಟ್ಟು; ಪ್ರವೀಣ್​ ಗೋಡ್ಕಿಂಡಿ ಪಿಟೀಲುವಾದಕ ಎಂದು ಮುದ್ರಣ

Published : Sep 20, 2017, 10:15 PM ISTUpdated : Apr 11, 2018, 12:54 PM IST
ದಸರಾ ಆಹ್ವಾನ ಪತ್ರಿಕೆಯಲ್ಲಿ ಆಡಳಿತ ಮಂಡಳಿ ಎಡವಟ್ಟು; ಪ್ರವೀಣ್​ ಗೋಡ್ಕಿಂಡಿ ಪಿಟೀಲುವಾದಕ ಎಂದು ಮುದ್ರಣ

ಸಾರಾಂಶ

ನಾಡಹಬ್ಬ ದಸರಾ ಆಹ್ವಾನ ಪತ್ರಿಕೆಯಲ್ಲಿ ಆಡಳಿತ ಮಂಡಳಿ ಎಡವಟ್ಟು ಮಾಡಿದೆ. ಖ್ಯಾತ ಕೊಳಲುವಾದಕ ಪ್ರವೀಣ್​ ಗೋಡ್ಕಿಂಡಿರನ್ನು ಪಿಟೀಲುವಾದಕ ಎಂದು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ.

ಮೈಸೂರು (ಸೆ.20): ನಾಡಹಬ್ಬ ದಸರಾ ಆಹ್ವಾನ ಪತ್ರಿಕೆಯಲ್ಲಿ ಆಡಳಿತ ಮಂಡಳಿ ಎಡವಟ್ಟು ಮಾಡಿದೆ. ಖ್ಯಾತ ಕೊಳಲುವಾದಕ ಪ್ರವೀಣ್​ ಗೋಡ್ಕಿಂಡಿರನ್ನು ಪಿಟೀಲುವಾದಕ ಎಂದು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ.

ವಿದೇಶದಲ್ಲೂ ತಮ್ಮ ಕೊಳಲು ವಾದನಕ್ಕೆ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕಲಾವಿದ ಪ್ರವೀಣ್​ ಗೋಡ್ಕಿಂಡಿ. ಆದರೆ ಈ ನಮ್ಮ ಕರ್ನಾಟಕ ಸರ್ಕಾರಕ್ಕೆ ಮಾತ್ರ ಪ್ರವೀಣ್ ಗೋಡ್ಕಿಂಡಿ ಯಾವ ವಾದ್ಯ ನುಡಿಸುತ್ತಾರೆ ಎಂದೇ ಇನ್ನೂ ತಿಳಿದಿಲ್ಲ. ನಾಳೆಯಿಂದ 8 ದಿನ ಅರಮನೆ ನಗರಿ ಮೈಸೂರಿನಲ್ಲಿ ವೈಭವಯುತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ದಸರಾ ಸಾಂಸ್ಕೃತಿಕ ಉತ್ಸವ ಸಮಿತಿ ಆಮಂತ್ರಣ ಪತ್ರಿಕೆಯಲ್ಲಿ ಪ್ರವೀಣ್ ಗೋಡ್ಖಿಂಡಿ ಖ್ಯಾತ ಪಿಟೀಲು ವಾದಕರು ಎಂದು ತಪ್ಪಾಗಿ ಮುದ್ರಿಸಿದೆ. ದಸರಾ ಸಾಂಸ್ಕೃತಿ ಕಾರ್ಯಕ್ರಮ ಆಹ್ವಾನ ಪತ್ರಿಕೆಯಲ್ಲಿ ಈ ರೀತಿ ಎಡವಟ್ಟು ಮಾಡಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟಿನ ಬಗ್ಗೆ ಪ್ರವೀಣ್​ ಗೋಡ್ಕಿಂಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ