ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಶಾಸಕನಿಂದಲೇ ಶಸ್ತ್ರಚಿಕಿತ್ಸೆ

Published : Feb 24, 2017, 11:21 AM ISTUpdated : Apr 11, 2018, 01:01 PM IST
ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಶಾಸಕನಿಂದಲೇ ಶಸ್ತ್ರಚಿಕಿತ್ಸೆ

ಸಾರಾಂಶ

ತೀವ್ರ ಹೊಟ್ಟೆ ನೋವಿನಿಂದ ಬಳುತ್ತಿದ್ದ ಮಹಿಳೆಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ. ಹೀಗಾಗಿ ವಿಷಯ ತಿಳಿದ ಮಿಜೋರಾಂ ಶಾಸಕ ಕೆ.ಬೈಚುವಾ ಆಸ್ಪತ್ರೆಗೆ ತೆರಳಿ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಮಹಿಳೆಯ ಪ್ರಾಣ ಉಳಿಸಿದ್ದಾರೆ.

ಐಜ್ವಾಲ್ (ಫೆ. 24): ಮಿಜೋರಾಂ ಶಾಸಕನೋರ್ವ ಮಾನವೀಯತೆ ಮೆರೆದು ಮಹಿಳೆಯೊಬ್ಬರ ಜೀವ ಉಳಿಸಿದ್ದಾರೆ.

ಮಿಜೋರಾಂ ಶಾಸಕ ಕೆ.ಬೈಚುವಾ ಕಾರ್ಯಕ್ರಮ ನಿಮಿತ್ತ ಗ್ರಾಮವೊಂದಕ್ಕೆ ತೆರಳಿದ್ದರು. ಆದರೆ ಗ್ರಾಮದಲ್ಲಿ ಮಹಿಳೆಯೋರ್ವಳು ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.

ತೀವ್ರ ಹೊಟ್ಟೆ ನೋವಿನಿಂದ ಬಳುತ್ತಿದ್ದ ಮಹಿಳೆಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ. ಹೀಗಾಗಿ ವಿಷಯ ತಿಳಿದ ಮಿಜೋರಾಂ ಶಾಸಕ ಕೆ.ಬೈಚುವಾ ಆಸ್ಪತ್ರೆಗೆ ತೆರಳಿ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಮಹಿಳೆಯ ಪ್ರಾಣ ಉಳಿಸಿದ್ದಾರೆ.

ನಂತರ ಮಹಿಳೆಯನ್ನು ಭೇಟಿ ಮಾಡಿದ ಕೆ.ಬೈಚುವಾರವರು ಸಂತೋಷದಿಂದ ಮಹಿಳೆಯ ಆರೋಗ್ಯ ವಿಚಾರಿಸಿದರು. ಈ ಹಿಂದೆ ಕೆ.ಬೈಚುವಾರವರು ಸೈಹಾ ಜಿಲ್ಲಾ ಸಿವಿಲ್ ಆಸ್ಪತ್ರೆಯಲ್ಲಿ ಸರ್ಜನ್ ಆಗಿ ಕಾರ್ಯನಿರ್ವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಎಂಟಿಸಿ ಫೀಡರ್ ಬಸ್ ಗಿಫ್ಟ್: ಇಲ್ಲಿದೆ ಹೊಸ ಬಸ್‌ಗಳ ವೇಳಾಪಟ್ಟಿ
ದೇಶದಿಂದ ಶಾಶ್ವತವಾಗಿ ಮರೆಯಾಗಲಿದೆ ಎಸಿಸಿ ಸಿಮೆಂಟ್‌ ಕಂಪನಿ!