ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ

Published : Aug 24, 2018, 01:05 PM ISTUpdated : Sep 09, 2018, 09:06 PM IST
ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ

ಸಾರಾಂಶ

 ಈ ಉಭಯ ಪಕ್ಷಗಳ ನಡುವಣ ಈ ದಿಢೀರ್‌ ಆಪ್ತತೆ ತಮಿಳುನಾಡು ರಾಜಕೀಯ ವಲಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. 

ಚೆನ್ನೈ/ನವದೆಹಲಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮಕ್ಕೆ ನಮನ ಸಲ್ಲಿಸುವ ನಿಟ್ಟಿನಲ್ಲಿ ಡಿಎಂಕೆ ನಾಯಕ ಸ್ಟಾಲಿನ್‌, ಗುರುವಾರ ಚೆನ್ನೈನ ಬಿಜೆಪಿ ಕಚೇರಿಗೆ ಆಗಮಿಸಿದ್ದರು. 

ಅವರ ಜೊತೆಗೆ ಕರುಣಾನಿಧಿ ಅವರ ಪುತ್ರಿ ಕನಿಮೋಳಿ ಕೂಡಾ ಉಪಸ್ಥಿತರಿದ್ದರು. ಬಿಜೆಪಿ ಕಚೇರಿಗೆ ಆಡಳಿತಾರೂಢ ಎಐಎಡಿಎಂಕೆ ನಾಯಕರು ಕೂಡಾ ಆಗಮಿಸಿದ್ದರಾದರೂ, ಡಿಎಂಕೆ ನಾಯಕರ ಆಗಮನ ಸಾಕಷ್ಟುಕುತೂಹಲ ಕೆರಳಿಸಿದೆ. 

ಇನ್ನೊಂದೆಡೆ ಡಿಎಂಕೆ ನಾಯಕ ದಿ.ಕರುಣಾನಿಧಿ ಅವರ ಸ್ಮರಣಾರ್ಥ ಆ.30ಕ್ಕೆ ಪಕ್ಷದ ವತಿಯಿಂದ ಚೆನ್ನೈನಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. ಇದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ. ಉಭಯ ಪಕ್ಷಗಳ ನಡುವಣ ಈ ದಿಢೀರ್‌ ಆಪ್ತತೆ ತಮಿಳುನಾಡು ರಾಜಕೀಯ ವಲಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆತಂಕಕಾರಿ ಹಂತಕ್ಕೆ ದೆಹಲಿ ಹವೆ: 430ರ ಗಡಿ ದಾಟಿದ ವಾಯು ಗುಣಮಟ್ಟ ಸೂಚ್ಯಂಕ: ವಾರದಲ್ಲಿ ಕೆಲವೇ ದಿನ ಮಕ್ಕಳಿಗೆ ಶಾಲೆ
ಈ 6 ದೇಶಗಳಲ್ಲಿ ‘ಧುರಂಧರ್’ ಬ್ಯಾನ್; ಆದ್ರೂ ಕಲೆಕ್ಷನ್‌ಗೆ ಸ್ವಲ್ಪವೂ ಹೊಡೆತವಿಲ್ಲ, ಅದು ಹೇಗೆ..!