
ಮಂಗಳೂರು (ಫೆ.02): ಕೆಐಎಡಿಬಿ ಅಧಿಕಾರಿ ಜೊತೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಬಿ.ಎ. ಮೊಯಿದ್ದೀನ್ ಬಾವಾ ಆನುಚಿತವಾಗಿ ವರ್ತಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಜೋಕಟ್ಟೆ-ಬೈಕಂಪಾಡಿ ರಸ್ತೆ ಕಾಮಗಾರಿ ವಿಚಾರದಲ್ಲಿ, ಸಾರ್ವಜನಿಕರ ಜೊತೆ ಕಚೇರಿಗೆ ನುಗ್ಗಿದ ಶಾಸಕ ಮೊಯ್ದೀನ್ ಬಾವಾ ಅಧಿಕಾರಿ ಕೈಗಾರಿಕಾಭಿವೃದ್ಧಿ ಅಧಿಕಾರಿ ಪ್ರಕಾಶ್ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ.
ಅಧಿಕಾರಿ ಜೊತೆ ಏಕವಚನದಲ್ಲಿ ಮಾತನಾಡಿದ ಶಾಸಕ ಮೊಯ್ದೀನ್ ಬಾವಾ, ಅಧಿಕಾರಿ ಪ್ರಕಾಶ್’ರನ್ನು ಎದ್ದು ನಿಂತು ಕ್ಷಮಾಪಣೆ ಕೇಳುವಂತೆ ಒತ್ತಾಯಿಸಿದ್ದಾರೆ.
ಈ ಘಟನೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಇದಕ್ಕೂ ಮುನ್ನ ಸಾರ್ವಜನಿಕರ ಜೊತೆ ಅಧಿಕಾರಿ ಪ್ರಕಾಶ್ ಉಡಾಫೆಯಿಂದ ವರ್ತಿಸಿದ್ದರು.
ಇದನ್ನು ಪ್ರಶ್ನಿಸಲು ಶಾಸಕರು ಸ್ಥಳೀಯರ ಜೊತೆ ಪ್ರಕಾಶ್ ಅವರ ಕಚೇರಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.