ಜೆಡಿಎಸ್ 100 ಕ್ಷೇತ್ರದಲ್ಲಿ ಗೆದ್ದರೆ ಕುತ್ತಿಗೆ ಕೊಯ್ದಿಡುವೆ : ಜಮೀರ್ ಬಳಿಕ ಬಾಲಕೃಷ್ಣ ಟಾಂಗ್

Published : Jul 27, 2017, 11:46 PM ISTUpdated : Apr 11, 2018, 12:45 PM IST
ಜೆಡಿಎಸ್ 100 ಕ್ಷೇತ್ರದಲ್ಲಿ ಗೆದ್ದರೆ ಕುತ್ತಿಗೆ ಕೊಯ್ದಿಡುವೆ : ಜಮೀರ್ ಬಳಿಕ ಬಾಲಕೃಷ್ಣ ಟಾಂಗ್

ಸಾರಾಂಶ

ಮಾಜಿ ಮುಖ್ಯಮಂತ್ರಿಗಳು ಕುಮಾರಸ್ವಾಮಿ ಕ್ಷೇತ್ರಗಳಲ್ಲಿ ನಿಲ್ಲಿಸಲು ಅಭ್ಯರ್ಥಿಗಳೇ ಇಲ್ಲ ಎನ್ನುತ್ತಿದ್ದಾರೆ. ಮತ್ತೊಂದೆಡೆ ರೇವಣ್ಣ ಈಗಾಗಲೇ 100 ಮಂದಿ ಶಾಸಕರಿದ್ದಾರೆ ಎಂದು ಹೇಳುತ್ತಿದ್ದಾರೆ.

ರಾಮನಗರ(ಜು.27): ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ರುಂಡ ಕತ್ತರಿಸಿಡುವೆ ಎಂದು ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತೊಬ್ಬ ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ. ಬಾಲಕೃಷ್ಣ, ರಾಜ್ಯದಲ್ಲಿ ಜೆಡಿಎಸ್ 100 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ನನ್ನ ಕುತ್ತಿಗೆ ಕೊಯ್ದು ಇಡುತ್ತೇನೆ ಎಂದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳು ಕುಮಾರಸ್ವಾಮಿ ಕ್ಷೇತ್ರಗಳಲ್ಲಿ ನಿಲ್ಲಿಸಲು ಅಭ್ಯರ್ಥಿಗಳೇ ಇಲ್ಲ ಎನ್ನುತ್ತಿದ್ದಾರೆ. ಮತ್ತೊಂದೆಡೆ ರೇವಣ್ಣ ಈಗಾಗಲೇ 100 ಮಂದಿ ಶಾಸಕರಿದ್ದಾರೆ ಎಂದು ಹೇಳುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 100 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದಲ್ಲಿ ನನ್ನ ಕುತ್ತಿಗೆ ಕೊಯ್ದು ಇಡುತ್ತೇನೆ ಎಂದು ಸವಾಲು ಹಾಕಿದ್ದಾರೆ. ರೇವಣ್ಣ ನಮ್ಮನ್ನು ಚಂಗಲಾಟದವರು ಎಂದಿದ್ದಾರೆ. ನಾವು ಮೊದಲಿಗೆ ಅವರ ಜೊತೆಯಲ್ಲೇ ಇದ್ದವರು. ಅವರಿಂದಲೇ ಚಂಗಲಾಟ ಕಲಿತಿದ್ದೇವೆ ಎಂದು ತಿರುಗೇಟು ನೀಡಿದ ಬಾಲಕೃಷ್ಣ, 25 ವರ್ಷಗಳಿಂದ ಒಟ್ಟಿಗಿದ್ದಾಗ ಕಂಡು ಬರದ ಚಂಗಲಾಟ ಈಗ ಅವರ ವಿರುದ್ಧ ಮಾತನಾಡಿದ್ದಕ್ಕೆ ಕಾಣುತ್ತಿದೆಯೇ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!