ಇವರನ್ನು ಕೊಲ್ಲಿಸುತ್ತಿದ್ದೆ ಎಂದು ವಿವಾದಕ್ಕೆ ಸಿಲುಕಿದ ಶಾಸಕ ಯತ್ನಾಳ್

Published : Jul 27, 2018, 09:02 AM IST
ಇವರನ್ನು ಕೊಲ್ಲಿಸುತ್ತಿದ್ದೆ ಎಂದು ವಿವಾದಕ್ಕೆ ಸಿಲುಕಿದ ಶಾಸಕ ಯತ್ನಾಳ್

ಸಾರಾಂಶ

ತಾವು ಗೃಹಮಂತ್ರಿ ಅಥವಾ ಮುಖ್ಯಮಂತ್ರಿಯಾಗಿದ್ದರೆ ಇಂತಹವರನ್ನು ಗುಂಡಿಟ್ಟು ಕೊಲ್ಲಿಸುತ್ತಿದ್ದೆ ಎಂದು ಹೇಳುವ ಮೂಲಕ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್  ಹೊಸ ವಿವಾದ ಸೃಷ್ಟಿಸಿದ್ದಾರೆ.

ವಿಜಯಪುರ: ಬುರ್ಖಾ ಧರಿಸಿದವರು, ಗಡ್ಡಧಾರಿಗಳು ನನ್ನ ಕಚೇರಿಯತ್ತ ಸುಳಿಯಬೇಡಿ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದ  ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ನಾನೇನಾದರೂ ಗೃಹಮಂತ್ರಿಯಾಗಿದ್ದರೆ ಬುದ್ಧಿಜೀವಿಗಳನ್ನು ನಿಲ್ಲಿಸಿ ಗುಂಡು ಹಾರಿಸುವಂತೆ ಹೇಳುತ್ತಿದ್ದೆ ಎನ್ನುವ ಮೂಲಕ ಮತ್ತೊಂದು ವಿವಾದಕ್ಕೆ ಸಿಕ್ಕಿಹಾಕಿಕೊಂಡಿದ್ದಾರೆ. 

ಗುರುವಾರ ನಡೆದ 19 ನೇ ಕಾರ್ಗಿಲ್ ವಿಜಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ದೇಶದ ಸೈನಿಕರ ಮೇಲೆ ಕಲ್ಲು ತೂರುವ ದೇಶದ್ರೋಹಿಗಳನ್ನು ಬೆಂಬಲಿಸುವ ಬುದ್ಧಿಜೀವಿಗಳಿಂದ ದೇಶ ಹಾಳಾಗಿದೆ. 

ನಮ್ಮ ದೇಶದ ಬುದ್ಧಿಜೀವಿಗಳು ದೇಶದ್ರೋಹಿಗಳಿಗಿಂತಲೂ ಅತ್ಯಂತ ಅಪಾಯಕಾರಿಯಾಗಿದ್ದಾರೆ. ನಾನೇನಾದರೂ ಗೃಹ ಮಂತ್ರಿಯಾಗಿದ್ದರೆ ಇಂಥವರನ್ನು ನಿಲ್ಲಿಸಿ ಗುಂಡು ಹಾರಿಸುವಂತೆ ಹೇಳುತ್ತಿದ್ದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!