
ಹಿರೇಕೆರೂರು: ಸಚಿವ ಸ್ಥಾನ ಕೈ ತಪ್ಪಿರುವುದು ಬೇಸರ ತರಿಸಿದೆ. ಇನ್ನು ಬೆಂಗಳೂರಿನ ನಾಯಕರಿಗೆ ಮಂಡಿ ಊರಿ ಕೂರುವ ಕಾಲ ಮುಗಿತು. ನಾವು ಉತ್ತರ ಕರ್ನಾಟಕದವರ ಗತ್ತು ಏನು ಎಂಬುದನ್ನು ಸೋಮವಾರ ನನ್ನ ಹೈಕಮಾಂಡ್ ಆಗಿರುವ ತಾಲೂಕಿನ ಜನರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಹೀಗೆ ಕಡ್ಡಿ ಮುರಿದಂತೆ ಹೇಳಿದವರು ಹಾವೇರಿ ಜಿಲ್ಲೆಯ ಸಚಿವ ಸ್ಥಾನದ ಆಕಾಂಕ್ಷಿ ಶಾಸಕ ಬಿ.ಸಿ.ಪಾಟೀಲ್.
ನಗರದಲ್ಲಿ ಗುರುವಾರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ನಿಂದ ಗೆಲುವು ಸಾಧಿಸಿದ ಏಕೈಕ ಶಾಸಕ ನಾನು. ಹಾವೇರಿ, ಗದಗ, ಧಾರವಾಡ ಭಾಗದ ಏಕೈಕ ಲಿಂಗಾಯತ ಕಾಂಗ್ರೆಸ್ ಶಾಸಕ. ಹೀಗಾಗಿ, ಸಚಿವ ಸ್ಥಾನ ಸಿಗುತ್ತದೆ ಎಂಬುದು ಎಲ್ಲರ ನಿರೀಕ್ಷೆಯಾಗಿತ್ತು. ಅದು ಸುಳ್ಳಾಗಿದೆ. ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ. ಇಷ್ಟು ದಿನ ಅವರು ಹೇಳಿದ ಹಾಗೆ ಕೇಳಿ, ಕೇಳಿ ಸಾಕಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.