ಕೆಜೆಪಿ ಶಾಸಕ ಬಿ.ಆರ್. ಪಾಟೀಲ್ ಕಾಂಗ್ರೆಸ್‌'ಗೆ?

Published : Jan 15, 2017, 04:25 PM ISTUpdated : Apr 11, 2018, 12:38 PM IST
ಕೆಜೆಪಿ ಶಾಸಕ ಬಿ.ಆರ್. ಪಾಟೀಲ್ ಕಾಂಗ್ರೆಸ್‌'ಗೆ?

ಸಾರಾಂಶ

ಜೆಡಿಎಸ್’ಗೆ ಮರಳುವುದು ಕನಸಿನ ಮಾತು, ಬಿಜೆಪಿ ಒಡೆದ ಮನೆಯಾಗಿದೆ ಹಾಗಾಗಿ ಕಾಂಗ್ರೆಸ್‌ ಸೇರಲು ಇಚ್ಚಿಸಿದ್ದೇನೆ ಎಂದು ಪಾಟೀಲ್ ಹೇಳಿದ್ದಾರೆ.

ಕಲಬುರಗಿ (ಜ.15): ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ ಆರ್ ಪಾಟೀಲ್ ಕಾಂಗ್ರೆಸ್‌’ಗೆ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಪಾಟೀಲ್, ಜಾತ್ಯತೀತತೆ ಉಳಿಬೇಕಾದರೆ ಬಿಜೆಪಿಯೇತರ ಪಕ್ಷಗಳ ಒಗ್ಗೂಡುವಿಕೆಯ ಅಗತ್ಯವಿದೆ, ಹಾಗಾಗಿ ಕಾಂಗ್ರೆಸ್‌ ಸೇರಲು ಇಚ್ಛೆ ಹೊಂದಿದ್ದೇನೆ, ಇದಕ್ಕೆ ಆ ಪಕ್ಷದ ಎಲ್ಲಾ ಮುಖಂಡರ ಬೆಂಬಲದ ವಿಶ್ವಾಸವಿದೆ ಎಂದಿದ್ದಾರೆ.

ಜೆಡಿಎಸ್’ಗೆ ಮರಳುವುದು ಕನಸಿನ ಮಾತು, ಬಿಜೆಪಿ ಒಡೆದ ಮನೆಯಾಗಿದೆ ಹಾಗಾಗಿ ಕಾಂಗ್ರೆಸ್‌ ಸೇರಲು ಇಚ್ಚಿಸಿದ್ದೇನೆ ಎಂದು ಪಾಟೀಲ್ ಈ ಸಂದರ್ಭದಲ್ಲಿ ಹೇಳಿದ್ದಾರೆ.

ನೋಟು ಅಪಮೌಲ್ಯಗೊಳಿಸಿದ ರೀತಿಯಲ್ಲೇ ಗಾಂಧಿಜೀಯನ್ನು ಅಪಮೌಲ್ಯಗೊಳಿಸಲು ಬಿಜೆಪಿ ಹೊರಟಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಬ್ರಿಗೇಡ್ ಮೂಲಕ ಒಳಜಗಳ ಸೃಷ್ಟಿಸಿ ಮೂರನೇಯವರಿಗೆ ಲಾಭ ಮಾಡಿಕೊಡುವುದು ಆರೆಸ್ಸೆಸ್’ನ ಅಜೆಂಡಾ ಆಗಿದೆ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ ಇಂಡಿಯಾ ನೇಮಕಾತಿ: 154 ಹುದ್ದೆಗಳಿಗೆ ಅರ್ಜಿ ಆಹ್ವಾನ, ತಕ್ಷಣವೇ ಅರ್ಜಿ ಸಲ್ಲಿಸಿ
Viral Video: ವೇದಿಕೆಯಲ್ಲೇ ಮಹಿಳಾ ವೈದ್ಯೆಯ ಹಿಜಾಬ್‌ ತೆಗೆಯಲು ಯತ್ನಿಸಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌