ಅಕ್ರಮ ಮರಳು ದಂಧೆ ಲಾರಿ ಹಿಡಿದುಕೊಟ್ಟ ಶಾಸಕ

Published : Jan 16, 2019, 09:38 AM IST
ಅಕ್ರಮ ಮರಳು ದಂಧೆ ಲಾರಿ ಹಿಡಿದುಕೊಟ್ಟ ಶಾಸಕ

ಸಾರಾಂಶ

ಅಕ್ರಮ ಮರಳು ದಂಧೆ ವಿರುದ್ಧ ಶಾಸಕನ ಸೀಕ್ರೆಟ್‌ ಆಪರೇಷನ್‌ |  ಹೊಂಚು ಹಾಕಿ ಕಾದು ಕುಳಿತು ಲಾರಿಗೆ ತಡೆ |  ಬಳಿಕ ಪೊಲೀಸರಿಗೆ ಒಪ್ಪಿಸಿದ ನಾಗಠಾಣಾ ಶಾಸಕ  

ವಿಜಯಪುರ (ಜ. 16):  ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ವಾಹನವನ್ನು ಶಾಸಕರೊಬ್ಬರು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಇಲ್ಲಿನ ವಿಜಯಪುರ-ಸೊಲ್ಲಾಪುರ ರಾ.ಹೆ. 50ರಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ನಾಗಠಾಣ ಕ್ಷೇತ್ರದ ಶಾಸಕ ಡಾ.ದೇವಾನಂದ ಚವ್ಹಾಣ, ಮರಳು ಸಾಗಣೆ ವಾಹನವನ್ನು ತಡೆದ ಜನಪ್ರತಿನಿಧಿ.

ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿರುವ ಕುರಿತು ನಿಖರ ಮಾಹಿತಿ ಪಡೆದ ಶಾಸಕರು, ದಂಧೆಕೋರರನ್ನು ಸಾಕ್ಷಿ ಸಮೇತ ಪೊಲೀಸರಿಗೊಪ್ಪಿಸಲು ಯೋಜನೆ ರೂಪಿಸಿದ್ದರು. ಅದರಂತೆ ತಮ್ಮ ಬೆಂಬಲಿಗರ ಜತೆಗೂಡಿ ಸೋಮವಾರ ರಾತ್ರಿ ಇಲ್ಲಿಗೆ ಸಮೀಪದ ರಾ.ಹೆ. ಪಕ್ಕದ ಹೊಲವೊಂದರಲ್ಲಿ ಕಾದು ಕುಳಿತಿದ್ದರು.

ಈ ವೇಳೆ ಅದೇ ಮಾರ್ಗದಲ್ಲಿ ಆಗಮಿಸಿದ ಅಕ್ರಮವಾಗಿ ಮರಳು ತುಂಬಿಸಿಕೊಂಡು ಸಾಗುತ್ತಿದ್ದ ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಚಾಲಕ ಪರಾರಿಯಾಗಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ವಿಜಯಪುರ ಆದರ್ಶನಗರ ಠಾಣಾ ಪೊಲೀಸರು ಮರಳು ತುಂಬಿದ ವಾಹನ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮ ಮರಳು ತಡೆಗೆ ಸಂಕಲ್ಪ:

ಕಳೆದ ಒಂದು ವಾರದ ಹಿಂದೆ ಇದೇ ರೀತಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ವೊಂದನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದೆ ಎಂದು ಶಾಸಕ ಚವ್ಹಾಣ ಈ ವೇಳೆ ಪ್ರತಿಕ್ರಿಯಿಸಿದ್ದಾರೆ.

ಅಕ್ರಮ ಮರಳು ಸಾಗಣೆ ತಡೆಗೆ ಸಂಕಲ್ಪ ಮಾಡಿದ್ದು, ಬರುವ ದಿನಗಳಲ್ಲಿಯೂ ತಾವು ಅಕ್ರಮ ಮರಳು ಸಾಗಣೆ ವಾಹನ ತಡೆದು ಪೊಲೀಸರಿಗೆ ಒಪ್ಪಿಸುವ ಕೆಲಸ ಮುಂದುವರಿಸುತ್ತೇನೆ ಎಂದು ಶಾಸಕರು ಹೇಳಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆಯಿಂದ ಮೊದಲಿನಿಂದಲೂ ರೋಸಿ ಹೋಗಿದ್ದೆ. ಈಗ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಣೆ ತಡೆಯಲು ಶಾಸಕತ್ವದ ಅಧಿಕಾರವಿದೆ. ಈ ಅಧಿಕಾರವನ್ನು ಜನರ ಸಲುವಾಗಿ ಸದುಪಯೋಗ ಮಾಡಿಕೊಂಡು ಅಕ್ರಮಕ್ಕೆ ಪರಿಣಾಮಕಾರಿಯಾಗಿ ತಡೆಯೊಡ್ಡುವೆ. ಈ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!