
ಬೆಳಗಾವಿ(ಜ.10): 'ಜನರು ನನ್ನನ್ನ ಗೆಲ್ಲಿಸಿದ್ದಾರೆ ಅವರಿಗೆ ನ್ಯಾಯ ಕೊಡಿಸುವುದೇ ನನ್ನ ಕೆಲಸ' ಎಂದು ಕುಡಚಿ ಕ್ಷೇತ್ರದ ಶಾಸಕ ಪಿ. ರಾಜೀವ್ ತಿಳಿಸಿದ್ದಾರೆ.
ಅಧಿಕಾರಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದರ ಬಗ್ಗೆ ಸುವರ್ಣ ನ್ಯೂಸ್'ನೊಂದಿಗೆ ಸ್ಪಷ್ಟಪಡಿಸಿದ ಅವರು, ನಾನು ಸ್ವಾರ್ಥಕ್ಕಾಗಿ ಕೆಲಸ ಮಾಡುತ್ತಿಲ್ಲ. ನಾವೆಲ್ಲರೂ ಜನರಿಗೆ ಸೇವೆ ಮಾಡುತ್ತಿದ್ದೇವೆ. ನಾನು ಅಧಿಕಾರಿಯಾಗಿ ಈ ಮೊದಲು ಕೆಲಸ ಮಾಡಿದ್ದೇನೆ. ಜನರಿಗೆ ನ್ಯಾಯ ಕೊಡಿಸುವ ವಿಚಾರದಲ್ಲಿ ಯಾರೆ ಆಗಲಿ ಮೊದಲು ತಾಳ್ಮೆಯಿಂದ ಹೇಳುತ್ತೇನೆ.ಅವರು ಕೇಳಲಿಲ್ಲ ಅಂದರೆ ಕಾನೂನಿನ ಚೌಕಟ್ಟಿನಲ್ಲಿ ಹೇಳುತ್ತೇನೆ. ಅದಕ್ಕೂ ಬಗ್ಗಲಿಲ್ಲ ಅಂದರೆ ನಾನು ಆ ಪದ ಬಳಸಲೆ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.