ಪಾದಯಾತ್ರೆ ವೇಳೆ ಲಾರಿ ಡಿಕ್ಕಿ: ಶಾಸಕ ಬಾವಾ ಪಾರು

Published : Mar 08, 2018, 07:13 AM ISTUpdated : Apr 11, 2018, 12:46 PM IST
ಪಾದಯಾತ್ರೆ ವೇಳೆ ಲಾರಿ ಡಿಕ್ಕಿ: ಶಾಸಕ ಬಾವಾ ಪಾರು

ಸಾರಾಂಶ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಆರಂಭವಾದ ‘ಸಾಮರಸ್ಯದ ಕಡೆ ಶಾಸಕರ ನÜಡೆ’ ಪಾದಯಾತ್ರೆಯ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೇಶವ ಸನಿಲ್‌ ಗಾಯಗೊಂಡಿದ್ದಾರೆ.

ಮೂಲ್ಕಿ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಆರಂಭವಾದ ‘ಸಾಮರಸ್ಯದ ಕಡೆ ಶಾಸಕರ ನÜಡೆ’ ಪಾದಯಾತ್ರೆಯ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೇಶವ ಸನಿಲ್‌ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಕಾಂಗ್ರೆಸ್‌ ಶಾಸಕ ಬಿ.ಎ. ಮೊಹಿಯುದ್ದೀನ್‌ ಬಾವಾ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಶಾಸಕ ಬಿ.ಎ. ಮೊಹಿಯುದ್ದೀನ್‌ ಬಾವಾ ನೇತೃತ್ವದಲ್ಲಿ ಮುಕ್ಕ ಜಂಕ್ಷನ್‌ ಬಳಿ ಆರಂಭಗೊಂಡ ಜಾಥಾವು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಕ್ಕದ ಶ್ರೀನಿವಾಸ್‌ ಕಾಲೇಜು ಎದುರುಗಡೆ ತೆರಳುತ್ತಿದ್ದಾಗ ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೇಶವ ಅವರಿಗೆ ಡಿಕ್ಕಿ ಹೊಡೆದಿದೆ.

ಕೇಶವ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಹೆಚ್ಚಿನ ಅನಾಹುತವಾಗಿಲ್ಲ. ಅಲ್ಲೇ ಇದ್ದ ಬಾವಾ ಸ್ವಲ್ಪದರಲ್ಲೇ ಪಾರಾದರು. ಬಳಿಕ ಪಾದಯಾತ್ರೆ ಮುಂದೆ ಸಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ತಮ್ಮನ್ನು ಬಿಜೆಪಿ ಉಚ್ಛಾಟನೆ ಮಾಡಿದ್ಯಾಕೆ? ರಹಸ್ಯ ಬಿಚ್ಚಿಟ್ಟ ಶಾಸಕ ಯತ್ನಾಳ್
ಮತಚೋರಿ ಬಗ್ಗೆ ದಿಲ್ಲೀಲಿ ಕೈ ನಾಯಕರ ರಣಕಹಳೆ: ಬಿಜೆಪಿ ವಿರುದ್ಧ ಖರ್ಗೆ, ರಾಗಾ, ಪ್ರಿಯಾಂಕಾ ಗುಡುಗು