ಎಸ್‌ಸಿಪಿ-ಟಿಎಸ್‌ಪಿ ಅನುದಾನ ತಿರಸ್ಕರಿಸಿದ ಶಾಸಕ

Published : Oct 30, 2017, 02:43 PM ISTUpdated : Apr 11, 2018, 01:08 PM IST
ಎಸ್‌ಸಿಪಿ-ಟಿಎಸ್‌ಪಿ ಅನುದಾನ ತಿರಸ್ಕರಿಸಿದ ಶಾಸಕ

ಸಾರಾಂಶ

ಕಡಿಮೆ ಅನುದಾನ ಬಿಡುಗಡೆಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಅಸಮಾಧಾನ | ಹೆಚ್ಚು ಅನುದಾನ ಬಿಡುಗಡೆಗೆ ಆಗ್ರಹ

ಹುಣಸಗಿ: 2017-18ನೇ ಸಾಲಿನ ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಸಣ್ಣ-ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಒದಗಿಸುವ ಉದ್ದೇಶದಿಂದ ಸುರಪುರ ತಾಲೂಕಿಗೆ ಅತೀ ಕಡಿಮೆ ಅನುದಾನ ಬಿಡುಗಡೆ ಮಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ, ಅನುದಾನ ತಿರಸ್ಕರಿಸಿರುವುದು ತಿಳಿದು ಬಂದಿದೆ.

ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಸಣ್ಣ- ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಒದಗಿಸುವ ಉದ್ದೇಶದಿಂದ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಶಾಸಕರಿಗೆ ಕೆಬಿಜೆಎನ್‌ಎಲ್ ಮುಖಾಂತರ ಪ್ರತಿ ವರ್ಷ ಬಿಡುಗಡೆ ಮಾಡಲಾಗುತ್ತಿತ್ತು.

ಸುರಪುರ ಕ್ಷೇತ್ರಕ್ಕೆ ಕಳೆದ ವರ್ಷ ಎಸ್‌ಟಿ ರೈತರಿಗೆ 25 ಕೋಟಿ ರು., ಎಸ್‌ಸಿ ರೈತರಿಗೆ 15 ಕೋಟಿ ರು.ಗಳನ್ನು ನೀಡಲಾಗಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಎಸ್‌ಟಿಗೆ ಮೀಸಲಾಗಿರುವ ಸುರಪುರ ವಿಧಾನಸಭೆಗೆ ಅನುದಾನ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿಯ ರೈತರಿಗಾಗಿ 7 ಕೋಟಿ ರು., ಪರಿಶಿಷ್ಟ ಪಂಗಡ ರೈತರಿಗಾಗಿ 2 ಕೋಟಿ ರು. ನಿಗದಿಪಡಿಸಿ ಇತ್ತೀಚೆಗೆ ಬಿಡುಗಡೆಗೊಳಿಸಲಾಗಿತ್ತು. ಆದರೆ ಅನುದಾನ ಅತೀ ಕಡಿಮೆಯಾಗಿರುವುರಿಂದ ಅಭಿವೃದ್ಧಿ ಅಸಾಧ್ಯ ಎಂದು ಶಾಸಕರು ಅತೃಪ್ತಿ ವ್ಯಕ್ತಪಡಿಸಿ ಅನುದಾನ ಒಪ್ಪಿಕೊಂಡಿರುವುದಿಲ್ಲವೆಂದು ತಿಳಿದು ಬಂದಿದೆ.

ಶಾಸಕರ ಸ್ಪಷ್ಟನೆ: ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ್ ಪ್ರತಿಕ್ರಿಯಿಸಿ, ಸುರಪುರ ಎಸ್.ಟಿ. ಕ್ಷೇತ್ರವಾಗಿದ್ದು, ಕಳೆದ ವರ್ಷ 2016-17ರ ಸಾಲಿಗೆ ಎಸ್‌ಸಿಗೆ 15 ಕೋಟಿ ಹಾಗೂ ಎಸ್‌ಟಿಗೆ 25 ಕೋಟಿ ರು. ಅನುದಾನ ಹಂಚಿಕೆಯಾಗಿತ್ತು. ಅದರ ಸದ್ಬಳಕೆಯೂ ಮಾಡಲಾಗಿತ್ತು. ಆದರೆ ಈ ಬಾರಿ ಎಸ್‌ಸಿಗೆ 7 ಕೋಟಿ ರು., ಎಸ್‌ಟಿಗೆ 2 ಕೋಟಿ ರು. ಮಾತ್ರ ನೀಡಲಾಗಿದೆ. ಇಷ್ಟು ಕಡಿಮೆ ಮೊತ್ತ ಅಭಿವೃದ್ಧಿಗೆ ಪೂರಕವಾಗಿಲ್ಲ. ಹೀಗಾಗಿ ಸ್ವತಃ ಮುಖ್ಯಮಂತ್ರಿಗಳನ್ನು ಶನಿವಾರ ಭೇಟಿ ಮಾಡಿ ಮನವಿ ನೀಡಿದ್ದು, ಕಳೆದ ವರ್ಷಕ್ಕಿಂತ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯ ಮಾಡಿದ್ದಾಗಿ ದೂರವಾಣಿಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯು ನನ್ನ ಕ್ಷೇತ್ರದಲ್ಲಿ ಅತಿ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಈ ಹಿಂದೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿರುವುದರಿಂದ ಸಣ್ಣ ಸಣ್ಣ ಪಿಕ್-ಅಪ್, ಕೆರೆ, ಬಾವಿ, ನದಿಗಳಿಂದ ರೈತರ ಜಮೀನುಗಳಿಗೆ ನೀರಾವರಿ ಒದಗಿಸಿರುವುದರಿಂದ ರೈತರು ಹಾಗೂ ರೈತ ಮಹಿಳೆಯರು ಕೃಷಿ ಹಾಗೂ ಹೈನುಗಾರಿಗೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಸರ್ಕಾರ ಹೆಚ್ಚಿನ ಅನುದಾನ ನೀಡಿದ್ದರೆ ರೈತರು ಸರ್ವತೋಮುಖ ಅಭಿವೃದ್ಧಿ ಹೊಂದಲಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್