ಶಾಸಕನ ಪುತ್ರನ ವಿರುದ್ಧ ವೇಶ್ಯಾವಾಟಿಕೆ ಆರೋಪ ಪ್ರಕರಣ: ಇಂದು ಜಾಮೀನು ಅರ್ಜಿ ವಿಚಾರಣೆ

Published : Sep 16, 2016, 03:02 AM ISTUpdated : Apr 11, 2018, 01:01 PM IST
ಶಾಸಕನ ಪುತ್ರನ ವಿರುದ್ಧ ವೇಶ್ಯಾವಾಟಿಕೆ ಆರೋಪ ಪ್ರಕರಣ: ಇಂದು ಜಾಮೀನು ಅರ್ಜಿ ವಿಚಾರಣೆ

ಸಾರಾಂಶ

ಮಡಿಕೇರಿ(ಸೆ.16): ಅನೈತಿಕ ಚಟುವಟಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತುಮಕೂರು ಜಿಲ್ಲೆ ತುರುವೇಕೆರೆ ಜೆಡಿಎಸ್‌ ಶಾಸಕ ಎಂ.ಟಿ.ಕೃಷ್ಣಪ್ಪ ಪುತ್ರ ಕೆ.ರಾಜೀವ್‌ ಸೇರಿದಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಕುಶಾಲನಗರ ಸಿವಿಲ್‌ ನ್ಯಾಯಾಲಯ  ಇಂದು ನಡೆಸಲಿದೆ.

ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬೆಟ್ಟಗೇರಿ ಹೋಮ್‌ಸ್ಟೇಯಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಸೆ. 11ರಂದು ನಾಲ್ವರನ್ನು ಪೊಲೀಸರು ಬಂಧಿಸಿ ಮಹಿಳೆಯನ್ನು ರಕ್ಷಿಸಿದ್ದರು. ಕೆ.ರಾಜೀವ್, ಶನಿವಾರಸಂತೆ ಬಳಿಯ ಕೂಗೆಕೋಡಿ ನಿವಾಸಿ ಕೆ.ಎಲ್.ಮಧು, ಶಾಂತವೇರಿ ನಿವಾಸಿ ಪ್ರಮೋದ್, ಹೋಮ್‌ಸ್ಟೇ ಮಾಲೀಕ ಪ್ರಸನ್ನ ನ್ಯಾಯಾಂಗ ಬಂಧನದಲ್ಲಿದ್ದು, ಆರೋಪಿಗಳ ಪರವಾಗಿ ಪಟ್ಟಣದ ವಕೀಲ ಸುರೇಶ್ ಬಾಬ್ಲಿ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಜಾಮೀನು ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶ ನಟರಾಜ್ ಅವರು ಜಾಮೀನು ಕೋರಿಕೆ ಬಗ್ಗೆ ಆಕ್ಷೇಪಣೆ ಸಲ್ಲಿಸಬೇಕಾಗಿರುವ ಸರ್ಕಾರಿ ವಕೀಲರು  ನ್ಯಾಯಾಲಯಕ್ಕೆ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಟಾದ ತಾಜ್‌, ಐಟಿಸಿಗೆ ಅದಾನಿ ಗ್ರೂಪ್ ಟಕ್ಕರ್, ಐಷಾರಾಮಿ ಹೋಟೆಲ್‌ ಉದ್ಯಮಕ್ಕೆ ಎಂಟ್ರಿ, ಏರ್ಪೋರ್ಟ್‌ಗಳೇ ಟಾರ್ಗೆಟ್!
ಬೆಂಗಳೂರು ಕಾಲೇಜಿನಲ್ಲಿ ಹಾಜರಾತಿ ಹಗರಣ; ಅಲಯನ್ಸ್ ವಿವಿ ದೂರು, 6 ಜನರ ವಿರುದ್ಧ ಎಫ್‌ಐಆರ್!