
ಬೆಂಗಳೂರು(ಜು.06): ಇತ್ತ ಮೈಸೂರಿನಲ್ಲಿ ದೇವೇಗೌಡರ ಮೊಮ್ಮಗ ಮಾತೃ ಪಕ್ಷ ಜೆಡಿಎಸ್ ವಿರುದ್ಧ ಭಿನ್ನಮತ ಸ್ಫೋಟಿಸಿದರೆ ಇತ್ತ 'ಕೈ' ಪಕ್ಷದಲ್ಲೂ ಆಂತರಿಕ ಕಲಹ ಶುರುವಾಗಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಸಂಸದ ಹಾಗೂ ಸುಧಾಕರ್ ನಡುವೆ ಆಂತರಿಕ ಭಿನ್ನಮತದಿಂದಾಗಿ ರಾಜೀನಾಮೆ ಘೋಷಿಸುತ್ತಿದ್ದಾರೆ ಎನ್ನಲಾಗಿದೆ.
ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಕ್ಷೇತ್ರದ ಜನತೆ,ಕಾರ್ಯಕರ್ತರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಈ ನಡುವೆ ಸುಧಾಕರ್ ಅವರ ತಂದೆ ಹಾಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಆಗಿರುವ ಕೇಶವ ರೆಡ್ಡಿ ಅವರು ಸಹ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.