
ಬೆಳಗಾವಿ (ಮಾ. 11): ಮಾಜಿ ಶಾಸಕ ಅಭಯ ಪಾಟೀಲ್ ಮತ್ತವರ ಸಹಚರರು ಪಾಂಡುರಂಗ ದ್ರೋತ್ರೆ ಮೇಲೆ ಹಲ್ಲೆ ನಡೆಸಿದ್ದಾರೆ.
ಮಾಜಿ ಶಾಸಕ ಅಭಯ ಪಾಟೀಲ್ ಹಾಗೂ ಹಲ್ಲೆಗೊಳಗಾದ ಪಾಂಡುರಂಗ ದ್ರೋತ್ರೆ ಇಬ್ಬರು ಬೆಳಗಾವಿ ದಕ್ಷಿಣ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು.
ನಗರದ ರಾಮನಾಥ ಭವನದಲ್ಲಿ ನಡೆದ ಬಿಜೆಪಿ ನವಶಕ್ತಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಪಾಂಡುರಂಗ ದೋತ್ರೆ ಮತ್ತು ಸುನೀಲ್ ಚೌಗಲೆ ಆಗಮಿಸಿದಕ್ಕೆ ಆಕ್ಷೇಪಿಸಿ ಹಲ್ಲೆ ನಡೆಸಲಾಗಿದೆ.
ಪಾಂಡುರಂಗ ದ್ರೋತ್ರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಶಾಸಕ ಅಭಯ ಪಾಟೀಲ್ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.