ಜೆಡಿಎಸ್'ನಿಂದ ಶಾಸಕನ ಅಮಾನತು ವಾಪಸ್

Published : Feb 09, 2017, 06:39 PM ISTUpdated : Apr 11, 2018, 12:41 PM IST
ಜೆಡಿಎಸ್'ನಿಂದ ಶಾಸಕನ ಅಮಾನತು ವಾಪಸ್

ಸಾರಾಂಶ

ಅಮಾನತು ಆದೇಶ ರದ್ದುಗೊಳಿಸುವಂತೆ ಮನವಿ ಮಾಡಿದ್ದರೂ. ಜತೆಗೆ ಕ್ಷಮಾಪಣೆ ಪತ್ರವನ್ನೂ ಬರೆದು ಪಕ್ಷದ ಶಿಸ್ತು ಸಮಿತಿಗೆ ಕೊಟ್ಟಿದ್ದರು.

ಬೆಂಗಳೂರು(ಫೆ.10): ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಜೆಡಿಎಸ್ ಶಾಸಕ ಕೆ.ಗೋಪಾಲಯ್ಯಅವರನ್ನು ಮತ್ತೆ ಪಕ್ಷದ ತೆಕ್ಕೆಗೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.

ಪರಿಣಾಮ ಶುಕ್ರವಾರ ನಡೆಯಲಿರುವ ಪಕ್ಷದ ರಾಜ್ಯ ಚುನಾವಣಾ ಸಂಘಟನಾ ಸಮಾವೇಶದಲ್ಲಿ ಗೋಪಾಲಯ್ಯ ಪಾಲ್ಗೊಳ್ಳಲಿದ್ದಾರೆ.ಅಡ್ಡಮತದಾನದ ಆರೋಪದ ಹಿನ್ನೆಲೆಯಲ್ಲಿ ಗೋಪಾಲಯ್ಯ ಸೇರಿದಂತೆ ಒಟ್ಟು ಎಂಟು ಶಾಸಕರನ್ನು ಪಕ್ಷದಿಂದ ಅಮಾನತಗೊಳಿಸಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಗೋಪಾಲಯ್ಯ ಅವರು ಅಮಾನತು ಆದೇಶ ರದ್ದುಗೊಳಿಸುವಂತೆ ಮನವಿ ಮಾಡಿದ್ದರೂ. ಜತೆಗೆ ಕ್ಷಮಾಪಣೆ ಪತ್ರವನ್ನೂ ಬರೆದು ಪಕ್ಷದ ಶಿಸ್ತು ಸಮಿತಿಗೆ ಕೊಟ್ಟಿದ್ದರು. ಅಂತಿಮವಾಗಿ ಅಮಾನತು ಆದೇಶ ವಾಪಸ್ ಪಡೆದುಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ