
ವಿಜಯಪುರ (ಆ.08): ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕ ಜಿಲ್ಲೆಗಳು ವರುಣನ ಅಬ್ಬರಜ್ಜೆ ತತ್ತರಿಸಿವೆ. ಪ್ರವಾಹ ಸಂತ್ರಸ್ತರ ನೆರವಿಗೆ ಹಲವರು ನಿಂತಿದ್ದು, ಇದೀಗ ಶಾಸಕರೋರ್ವರು ನೆರವು ನೀಡುವುದಾಗಿ ಹೇಳಿದ್ದಾರೆ.
ಪ್ರವಾಹದಲ್ಲಿ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ಜನತೆಗೆ ನೆರವಾಗುವ ದೃಷ್ಟಿಯಿಂದ ಒಂದು ತಿಂಗಳ ವೇತನ ನೀಡುವುದಾಗಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ತಿಳಿಸಿದರು.
ಇಲ್ಲಿಯವರೆಗೂ ರಾಜ್ಯದಲ್ಲಿ ಮಳೆ ಇಲ್ಲವೆಂದು ಪರಿತಪಿಸಿದ್ದೇವೆ. ಆದರೆ ಈಗ ಪ್ರವಾಹ ಎದುರಾಗಿ ಪರಿಸ್ಥಿತಿ ಗಂಭೀರವಾಗಿದೆ. ಬಹುತೇಕರು ಸೂರು ಕಳೆದುಕೊಂಡಿದ್ದಾರೆ. ನೆಲೆ ಇಲ್ಲದೇ ಪರದಾಡುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ನಡೆಸಿ ನೆರವು ನೀಡಲು ಸಿದ್ಧರಾಗಿದ್ದಾರೆ ಎಂದರು.
ಕೇಂದ್ರ ಹಣಕಾಸು ಸಚಿವಾಲಯ ಹಾಗೂ ಪ್ರಧಾನಿಯವರಿಗೆ ಮುಖ್ಯಮಂತ್ರಿ ಮನವರಿಕೆ ಮಾಡಿ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಬಳಿ ಪರಿಹಾರಕ್ಕೆ ವಿನಂತಿಸಿದ್ದಾರೆ. ಜೊತೆಗೆ ಸಂತ್ರಸ್ತರಿಗೆ ನೈತಿಕ ಮನೋಬಲ ತುಂಬಿದ್ದಾರೆ ಎಂದು ಶಹಾಪುರ ಹೇಳಿದರು.
ಅಲ್ಲದೇ ತಾವು ಒಂದು ತಿಂಗಳ ವೇತನ ನೆರವಾಗಿ ನೀಡುತ್ತಿದ್ದು, ಕಾರ್ಪೊರೇಟ್ ಸಂಸ್ಥೆಗಳು ಸಂತ್ರಸ್ಥರ ನೆರವಿಗೆ ಬಂದು ಕಣ್ಣೀರೊರೆಸುವ ಕೆಲಸ ಮಾಡಬೇಕು ಎಂದು ಇದೇ ವೇಳೆ ವಿಧಾನಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಅರುಣ ಶಹಾಪುರ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.