
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂರಿಂದ ಕಾನೂನು ಉಲ್ಲಂಘನೆ ಅರೋಪ ಕೇಳಿ ಬಂದಿದೆ.
ವಿಧಾನ ಪರಿಷತ್ತು ಸದಸ್ಯರಾಗಿರುವ ಇಬ್ರಾಹಿಂ ಎರಡೆರಡು ಕಡೆ ವೋಟರ್ ಐಡಿ ಹೊಂದಿದ್ದಾರೆ ಎಂದು ಹೇಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರು ಜಿಲ್ಲೆಯ ಶಿವಾಜಿನಗರ ಕ್ಷೇತ್ರ ಎರಡು ಕಡೆ ವೋಟರ್ ಐಡಿ ಹೊಂದಿದ್ದಾರೆ.
ಚುನಾವಣಾ ಆಯೋಗದ ಪ್ರಕಾರ ಎರಡು ಕಡೆ ವೋಟರ್ ಐಡಿ ಪಡೆಯುವುದು ಕಾನೂನು ಬಾಹಿರ. ಎಂ.ಎಲ್.ಸಿ ಆಸೆಗೆ ಕಾನೂನು ಬಾಹಿರವಾಗಿ ವೋಟರ್ ಐಡಿ ಪಡೆದ್ರಾ ಇಬ್ರಾಹಿಂ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲು ಮುಂದಾಗಿದೆ. ವಿರೋಧ ಪಕ್ಷ ನಾಯಕ ಪದ್ಮನಾಭರೆಡ್ಡಿ ನೇತೃತ್ವದಲ್ಲಿ ನಾಳೆ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.