
ದೇವನಹಳ್ಳಿ [ಜು.11] : ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾ ಮುಂದುವರಿದಿದೆ. ಹಲವು ಶಾಸಕರು ರಾಜೀನಾಮೆ ನೀಡಿ ಮುಂಬೈ ಸೇರಿದ್ದಾರೆ. ಇತ್ತ ಉಳಿದವರನ್ನು ಕಾಪಾಡಿಕೊಳ್ಳುವ ಸಲುವಾಗಿ ಜೆಡಿಎಸ್ ಮುಖಂಡರು ತಮ್ಮ ಶಾಸಕರನ್ನು ದೇವನಹಳ್ಳಿ ರೆಸಾರ್ಟ್ ನಲ್ಲಿ ಇರಿಸಿ ರಕ್ಷಣೆ ನೀಡಿದ್ದಾರೆ.
15ಕ್ಕೂ ಹೆಚ್ಚು ಶಾಸಕರನ್ನು ದೇವನಹಳ್ಳಿಯ ಪ್ರೆಸ್ಟೀಜ್ ಗಾಲ್ಫ್ ಶೇರ್ ರೆಸಾರ್ಟ್ ನಲ್ಲಿ ಇರಿಸಿದ್ದು, ಇವರೊಂದಿಗೆ ತೆರಳಿದ್ದ MLC ಶರವಣ ರೆಸಾರ್ಟ್ ನಿಂದ ಹೊರ ಬಂದಿದ್ದಾರೆ.
ಕರ್ನಾಟಕ ರಾಜಕೀಯ ಪ್ರಹಸನದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಶಾಸಕರ ಪಾಳಯವನ್ನು ಅಲ್ಲಿಯೇ ಬಿಟ್ಟು ಹೊರ ಬಂದ ಶರವಣ ರಾಜಕೀಯ ವಿಚಾರಗಳ ಬಗ್ಗೆ ಯಾವುದೇ ರೀತಿ ಪ್ರತಿಕ್ರಿಯೆ ನೀಡದೇ ನಡೆದಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಶಾಸಕ ಶರವಣ ನಿರಾಕರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.