ಮೈಸೂರು ದಸರಾ: ವೈಭವದ ಜಂಬೂಸವಾರಿ ಕಣ್ತುಂಬಿಕೊಂಡ ಜನತೆ

Published : Oct 19, 2018, 07:08 PM IST
ಮೈಸೂರು ದಸರಾ: ವೈಭವದ ಜಂಬೂಸವಾರಿ ಕಣ್ತುಂಬಿಕೊಂಡ ಜನತೆ

ಸಾರಾಂಶ

 ಸತತ 7 ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಲ್ಲಿ ನಡೆದಿದ್ದಾನೆ. 

ಮೈಸೂರು, [ಅ.19]:  ಅರಮನೆ ಆವರಣದಿಂದ ಬಲರಾಮ ದ್ವಾರದ ಮೂಲಕ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್​ ಅರ್ಜುನ ಸಾಗಿದ್ದು, ಚಿನ್ನದ ಅಂಬಾರಿ ಕಣ್ತುಂಬಿಕೊಂಡ ಸಾರ್ವಜನಿಕರ ಹರ್ಷೋದ್ಗಾರ ಮುಗಿಲು ಉಟ್ಟಿತು.

ಜಯಚಾಮರಾಜೇಂದ್ರ ವೃತ್ತ, ಕೃಷ್ಣರಾಜೇಂದ್ರ ವೃತ್ತ, ಮಾರ್ಕೆಟ್ ರಸ್ತೆ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪದ ವರೆಗೆ ಜಂಬೂ ಸವಾರಿ ನಡೆಯಿತು. ಸತತ 7 ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಲ್ಲಿ ನಡೆದಿದ್ದಾನೆ. 

ಮೈಸೂರು ದಸರಾ 2018ರ ವಿಶೇಷತೆಗಳು

ಅಂಬಾರಿ ಸಾಗುತ್ತಿರುವ ದಾರಿಯ ಇಕ್ಕೆಲದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ  ಜನಸ್ತೋಮ ಸೇರಿದ್ದು, ಹೂಗಳನ್ನು ಎರಚಿ ಕೈಮುಗಿಯುತ್ತಿರುವ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದುಕೊಂಡರು.

ಅಂಬಾರಿ ಹೊರುತ್ತಿರುವ ಅರ್ಜುನನಿಗೆ ಆನೆಗಳಾದ ವರಲಕ್ಷ್ಮೀ, ಕಾವೇರಿ ಸಾಥ್​​ ನೀಡಿದರು. ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಸಿಎಂ ಹೆಚ್​​. ಡಿ. ಕುಮಾರಸ್ವಾಮಿ, ಸಚಿವ ಜಿ.ಟಿ. ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಮ್​​ ಜಿ. ಶಂಕರ್​​, ನಗರ ಪೊಲೀಸ್​ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್​​​ ಅವರು ಗೌರವ ಪುಷ್ಪಾರ್ಚನೆ ಸಲ್ಲಿಸಿದರು. 

ಅರ್ಜುನ ಅಂಬಾರಿಯನ್ನು ಹೊರುತ್ತಿರುವ ಸುಂದರ ದೃಶ್ಯವನ್ನು ಸ್ಥಳದಲ್ಲಿ ಸೇರಿದ್ದ ದಸರಾ ಪ್ರಿಯರು ಮೊಬೈಲ್​​ನಲ್ಲಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?