
ಮುಂಬೈ (ಸೆ.10): ತನ್ನಿಂದ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಾರ್ಯಕರ್ತರು (ಎಂಎನ್ ಎಸ್) ಲಂಚವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ ಕಾಮಿಡಿಯನ್ ಕಪಿಲ್ ಶರ್ಮಾ ಕ್ಷಮೆ ಕೇಳಬೇಕೆಂದು ಎಂಎನ್ ಎಸ್ ಆಗ್ರಹಿಸಿದೆ. ಒಂದು ವೇಳೆ ಕಪಿಲ್ ಶರ್ಮಾ ಕ್ಷಮೆ ಕೇಳದಿದ್ದರೆ ಅವರ ಶೋವನ್ನು ಶೂಟಿಂಗ್ ಮಾಡಲು ಬಿಡುವುದಿಲ್ಲವೆಂದು ಎಂಎನ್'ಎಸ್ ಹೇಳಿದೆ.
ವಿವಾದಾತ್ಮಕ ಹೇಳಿಕೆ ನೀಡಿದ ನಟ ಕಪಿಲ್ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಅವರ ಹೇಳಿಕೆಗೆ ಬೆಂಬಲ ನೀಡಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೂ ಸಹ ಎಂಎನ್ ಎಸ್ ನಾಯಕಿ ಶಾಲಿನಿ ಠಾಕ್ರೆ ಗುಡುಗಿದ್ದಾರೆ.
ಕಪಿಲ್ ಶರ್ಮಾ ಕಾನೂನುಬಾಹಿರವಾಗಿ ನಾಲ್ಕಂಸ್ಥಿನ ಮನೆ ಕಟ್ಟುತ್ತಿದ್ದಾರೆ. ಮನೆ ಕಟ್ಟುತ್ತಿರುವ ಜಾಗ ಮ್ಯಾಂಗ್ರೋವ್ ಕಾಡುಗಳನ್ನು ಬೆಳೆಸಲು ಮೀಸಲಾಗಿದೆ. ಅದನ್ನ ನೀವು ಮುಟ್ಟಲಾಗುವುದಿಲ್ಲ. ಆ ಜಾಗವನ್ನು ಅತಿಕ್ರಮಿಸಲು ಮುಂದಾದರೆ ನಿಮ್ಮನ್ನು ಬಂಧಿಸಲಾಗುವುದು. ಇದಕ್ಕೆ ಹೇಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಮೊದಲು ಗೊತ್ತಾಗಬೇಕು ಎಂದು ಶಾಲಿನಿ ಠಾಕ್ರೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.